ಓದುಗರ ಪತ್ರ

ಓದುಗರ ಪತ್ರ | ಜಾಲತಾಣದಲ್ಲಿ ಸಭ್ಯತೆಯಿರಲಿ

ಕೊಲೆ ಆರೋಪ ಎದುರಿಸುತ್ತಿರುವ ಕನ್ನಡ ನಟನೊಬ್ಬನ ಅಭಿಮಾನಿಗಳು ಹಾಗೂ ಕನ್ನಡ ನಟಿಯೊಬ್ಬರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂದೇಶ ಸಮರ ಕನ್ನಡ ಚಿತ್ರ ಪ್ರೇಮಿಗಳಿಗೆ ಬೇಸರ ತರಿಸಿದೆ. ಇತ್ತೀಚೆಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಬಿಂಬಿಸುತ್ತಿರುವುದು ಕಳವಳಕಾರಿ ಸಂಗತಿ. ಮಹಿಳಾ ಸೆಲೆಬ್ರಿಟಿಗಳಿಗೇ ಕೆಟ್ಟ ಸಂದೇಶಗಳನ್ನು ಕಳುಹಿಸುತ್ತಾರೆಂದರೆ, ಇನ್ನು ಸಾಮಾನ್ಯ ಹೆಣ್ಣು ಮಕ್ಕಳ ಕಥೆ ಏನಾಗಬೇಡ ಎಂಬುದನ್ನು ಯೋಚಿಸಬೇಕಿದೆ.

ತಮ್ಮ ನಾಯಕನ ಕುರಿತ ಅಭಿಮಾನವನ್ನು ಈ ಬಗೆಯಲ್ಲಿ ವ್ಯಕ್ತಪಡಿ ಸುವ ಅಗತ್ಯವೇನಿತ್ತು ಎನ್ನುವುದು ಪ್ರಜ್ಞಾವಂತರನ್ನು ಕಾಡುತ್ತಿರುವ ಪ್ರಶ್ನೆ. ಕೆಲವೊಮ್ಮೆ ಇಂತಹ ಅತಿರೇಕದ ಅಭಿಮಾನವೇ ಪ್ರಾಣಕ್ಕೆ ಅಪಾಯವಾಗಿ ಪರಿಣಮಿಸುವುದುಂಟು. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಬಿಗಿ ನಿಯಂತ್ರಣದ ಕ್ರಮ ಅಗತ್ಯ. ಈ ರೀತಿಯ ಪ್ರಕರಣಗಳು ನಡೆಯುತ್ತಿದ್ದರೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಇದಕ್ಕೂ ನನಗೂ ಸಂಬಂಧವಿಲ್ಲವೆಂಬಂತೆ ವರ್ತಿಸುವುದನ್ನು ಬಿಟ್ಟು ಸಂಬಂಧ ಪಟ್ಟವರನ್ನು ಕರೆಯಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲು ಕ್ರಮ ವಹಿಸ ಬೇಕಾಗಿದೆ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

27 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

47 mins ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

1 hour ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

2 hours ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

5 hours ago