ಓದುಗರ ಪತ್ರ
ಕೊಲೆ ಆರೋಪ ಎದುರಿಸುತ್ತಿರುವ ಕನ್ನಡ ನಟನೊಬ್ಬನ ಅಭಿಮಾನಿಗಳು ಹಾಗೂ ಕನ್ನಡ ನಟಿಯೊಬ್ಬರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂದೇಶ ಸಮರ ಕನ್ನಡ ಚಿತ್ರ ಪ್ರೇಮಿಗಳಿಗೆ ಬೇಸರ ತರಿಸಿದೆ. ಇತ್ತೀಚೆಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಬಿಂಬಿಸುತ್ತಿರುವುದು ಕಳವಳಕಾರಿ ಸಂಗತಿ. ಮಹಿಳಾ ಸೆಲೆಬ್ರಿಟಿಗಳಿಗೇ ಕೆಟ್ಟ ಸಂದೇಶಗಳನ್ನು ಕಳುಹಿಸುತ್ತಾರೆಂದರೆ, ಇನ್ನು ಸಾಮಾನ್ಯ ಹೆಣ್ಣು ಮಕ್ಕಳ ಕಥೆ ಏನಾಗಬೇಡ ಎಂಬುದನ್ನು ಯೋಚಿಸಬೇಕಿದೆ.
ತಮ್ಮ ನಾಯಕನ ಕುರಿತ ಅಭಿಮಾನವನ್ನು ಈ ಬಗೆಯಲ್ಲಿ ವ್ಯಕ್ತಪಡಿ ಸುವ ಅಗತ್ಯವೇನಿತ್ತು ಎನ್ನುವುದು ಪ್ರಜ್ಞಾವಂತರನ್ನು ಕಾಡುತ್ತಿರುವ ಪ್ರಶ್ನೆ. ಕೆಲವೊಮ್ಮೆ ಇಂತಹ ಅತಿರೇಕದ ಅಭಿಮಾನವೇ ಪ್ರಾಣಕ್ಕೆ ಅಪಾಯವಾಗಿ ಪರಿಣಮಿಸುವುದುಂಟು. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಬಿಗಿ ನಿಯಂತ್ರಣದ ಕ್ರಮ ಅಗತ್ಯ. ಈ ರೀತಿಯ ಪ್ರಕರಣಗಳು ನಡೆಯುತ್ತಿದ್ದರೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಇದಕ್ಕೂ ನನಗೂ ಸಂಬಂಧವಿಲ್ಲವೆಂಬಂತೆ ವರ್ತಿಸುವುದನ್ನು ಬಿಟ್ಟು ಸಂಬಂಧ ಪಟ್ಟವರನ್ನು ಕರೆಯಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲು ಕ್ರಮ ವಹಿಸ ಬೇಕಾಗಿದೆ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…