ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಅನುಮಾನ ಈಗ ಕಾಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದಂತಿದೆ. ರಾಜ್ಯಕ್ಕೆ ಕೇಂದ್ರದಿಂದ ಪದೇ ಪದೇ ಅನ್ಯಾಯವಾಗುತ್ತಿದೆ ಎನ್ನುತ್ತಿರುವ ಸಿದ್ದರಾಮಯ್ಯನವರು ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಿ ಬಳಿಕ ಬಜೆಟ್ನಲ್ಲಿ ರಾಜ್ಯಕ್ಕೆ ಮೋಸವಾಗಿದೆ ಎನ್ನುತ್ತಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಗಳಿಗೂ ಗೈರಾಗಿದ್ದರು. ಒಮ್ಮೆ ಮಾತ್ರ ಈ ಸಭೆಗೆ ಸರ್ಕಾರದ ಪರವಾಗಿ ಸಚಿವ ಕೃಷ್ಣ ಬೈರೇಗೌಡರನ್ನು ಕಳುಹಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ನೇತೃತ್ವದಲ್ಲಿ ನಡೆಯುವ ಸಭೆಗಳಿಗೆ ಹಾಜರಾಗಿ ರಾಜ್ಯದ ಅಗತ್ಯತೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಬದಲು ಸಭೆಗಳಿಗೆ ಗೈರಾಗುವ ಮೂಲಕ ಸಿಕ್ಕ ಅವಕಾಶಗಳನ್ನೆಲ್ಲ ಕೈಚೆಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ.
ಸಿದ್ದರಾಮಯ್ಯನವರ ಈ ನಡೆ ಅವರು ರಾಜ್ಯಕ್ಕೆ ಮುಖ್ಯ ಮಂತ್ರಿಯೋ? ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಪ್ರಶ್ನೆ ಮೂಡಿಸಿದೆ. ನಲವತ್ತು ವರ್ಷಗಳ ರಾಜಕೀಯ ಅನುಭವದಲ್ಲಿ ಅವರು ಮೊದಲ ಬಾರಿಗೆ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದವರಂತೆ ವರ್ತಿಸುತ್ತಿದ್ದಾರೇನೋ ಅನಿಸುತ್ತದೆ.
-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…