ಓದುಗರ ಪತ್ರ

ಕೇಂದ್ರ ಸರ್ಕಾರದ ಸಭೆಗಳಿಗೆ ಸಿಎಂ ಹಾಜರಾಗಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಅನುಮಾನ ಈಗ ಕಾಡುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದಂತಿದೆ. ರಾಜ್ಯಕ್ಕೆ ಕೇಂದ್ರದಿಂದ ಪದೇ ಪದೇ ಅನ್ಯಾಯವಾಗುತ್ತಿದೆ ಎನ್ನುತ್ತಿರುವ ಸಿದ್ದರಾಮಯ್ಯನವರು ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಬಜೆಟ್‌ ಪೂರ್ವಭಾವಿ ಸಭೆಗೆ ಗೈರಾಗಿ ಬಳಿಕ ಬಜೆಟ್‌ನಲ್ಲಿ ರಾಜ್ಯಕ್ಕೆ ಮೋಸವಾಗಿದೆ ಎನ್ನುತ್ತಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಗಳಿಗೂ ಗೈರಾಗಿದ್ದರು. ಒಮ್ಮೆ ಮಾತ್ರ ಈ ಸಭೆಗೆ ಸರ್ಕಾರದ ಪರವಾಗಿ ಸಚಿವ ಕೃಷ್ಣ ಬೈರೇಗೌಡರನ್ನು ಕಳುಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ನೇತೃತ್ವದಲ್ಲಿ ನಡೆಯುವ ಸಭೆಗಳಿಗೆ ಹಾಜರಾಗಿ ರಾಜ್ಯದ ಅಗತ್ಯತೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಬದಲು ಸಭೆಗಳಿಗೆ ಗೈರಾಗುವ ಮೂಲಕ ಸಿಕ್ಕ ಅವಕಾಶಗಳನ್ನೆಲ್ಲ ಕೈಚೆಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ.

ಸಿದ್ದರಾಮಯ್ಯನವರ ಈ ನಡೆ ಅವರು ರಾಜ್ಯಕ್ಕೆ ಮುಖ್ಯ ಮಂತ್ರಿಯೋ? ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಪ್ರಶ್ನೆ ಮೂಡಿಸಿದೆ. ನಲವತ್ತು ವರ್ಷಗಳ ರಾಜಕೀಯ ಅನುಭವದಲ್ಲಿ ಅವರು ಮೊದಲ ಬಾರಿಗೆ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದವರಂತೆ ವರ್ತಿಸುತ್ತಿದ್ದಾರೇನೋ ಅನಿಸುತ್ತದೆ.

-ಶಿವಮೊಗ್ಗ ನಾ.ದಿನೇಶ್ ಅಡಿಗ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago