ಓದುಗರ ಪತ್ರ
ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ ಪ್ರಶ್ನಿಸಿರುವ ಕೆಲವರು ಬಾಡೂಟ ಏಕಿಲ್ಲ? ಎಂದು ಕೇಳಿದ್ದಾರೆ.
ಈ ಬಗ್ಗೆ ಹೋರಾಟವೊಂದು ಪ್ರಾರಂಭ ವಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವನ್ನೂ ನೀಡುವಂತೆ ಮಂಡ್ಯ ಜಿಲ್ಲಾ ಽಕಾರಿಗೆ ಕೆಲವು ಸಂಘಟನೆಗಳು ಮನವಿ ಮಾಡಿವೆ. ಇದು ಸಮಂಜಸವಲ್ಲ.
ಸಮ್ಮೇಳನಕ್ಕೆ ಬರುವವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಇಲ್ಲಿ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ಬಾಡೂಟ ಸೇವನೆ ಮಾಡಲು ಇದೇನು ಮದುವೆ ಅಥವಾ ಇನ್ನಿತರ ವೈಯಕ್ತಿಕ ಕಾರ್ಯಕ್ರಮಗಳ ಔತಣಕೂಟವಲ್ಲ. ಸಾಹಿತ್ಯ ಎಂಬುದು ಕೂಡ ಸಾತ್ವಿಕ ಆಹಾರದಂತೆಯೇ. ಇಲ್ಲಿ ಉತ್ತಮ ಚರ್ಚೆಗಳಿಗೆ ಅವಕಾಶ ನೀಡಬೇಕೇ ವಿನಾ ಸಾಹಿತ್ಯ ಸಮ್ಮೇಳನ ಬಾಡೂಟದ ಅಡ್ಡೆಯಾಗುವುದು ಒಳ್ಳೆಯ ಬೆಳವಣಿಗೆಯಲ್ಲ. ಸಸ್ಯಾಹಾರ ಎಲ್ಲರೂ ಸೇವಿಸುವ ಆಹಾರವಾಗಿದ್ದು, ಎಲ್ಲ ಸಾರ್ವಜನಿಕ ಸಮ್ಮೇಳನಗಳು, ಕಾರ್ಯಕ್ರಮಗಳಲ್ಲಿಯೂ ಸಸ್ಯಾಹಾರವನ್ನೇ ನೀಡಲಾಗುತ್ತಿದೆ. ಆದ್ದರಿಂದ ಜಿಲ್ಲಾಽಕಾರಿಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲಿ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…