ಓದುಗರ ಪತ್ರ

ಓದುಗರ ಪತ್ರ | ಸಾಹಿತ್ಯ ಸಮ್ಮೇಳನದ ಗೌರವಕ್ಕೆ ಧಕ್ಕೆಯಾಗದಿರಲಿ

ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ ಪ್ರಶ್ನಿಸಿರುವ ಕೆಲವರು ಬಾಡೂಟ ಏಕಿಲ್ಲ? ಎಂದು ಕೇಳಿದ್ದಾರೆ.

ಈ ಬಗ್ಗೆ ಹೋರಾಟವೊಂದು ಪ್ರಾರಂಭ ವಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವನ್ನೂ ನೀಡುವಂತೆ ಮಂಡ್ಯ ಜಿಲ್ಲಾ ಽಕಾರಿಗೆ ಕೆಲವು ಸಂಘಟನೆಗಳು ಮನವಿ ಮಾಡಿವೆ. ಇದು ಸಮಂಜಸವಲ್ಲ.

ಸಮ್ಮೇಳನಕ್ಕೆ ಬರುವವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಇಲ್ಲಿ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ಬಾಡೂಟ ಸೇವನೆ ಮಾಡಲು ಇದೇನು ಮದುವೆ ಅಥವಾ ಇನ್ನಿತರ ವೈಯಕ್ತಿಕ ಕಾರ್ಯಕ್ರಮಗಳ ಔತಣಕೂಟವಲ್ಲ. ಸಾಹಿತ್ಯ ಎಂಬುದು ಕೂಡ ಸಾತ್ವಿಕ ಆಹಾರದಂತೆಯೇ. ಇಲ್ಲಿ ಉತ್ತಮ ಚರ್ಚೆಗಳಿಗೆ ಅವಕಾಶ ನೀಡಬೇಕೇ ವಿನಾ ಸಾಹಿತ್ಯ ಸಮ್ಮೇಳನ ಬಾಡೂಟದ ಅಡ್ಡೆಯಾಗುವುದು ಒಳ್ಳೆಯ ಬೆಳವಣಿಗೆಯಲ್ಲ. ಸಸ್ಯಾಹಾರ ಎಲ್ಲರೂ ಸೇವಿಸುವ ಆಹಾರವಾಗಿದ್ದು, ಎಲ್ಲ ಸಾರ್ವಜನಿಕ ಸಮ್ಮೇಳನಗಳು, ಕಾರ್ಯಕ್ರಮಗಳಲ್ಲಿಯೂ ಸಸ್ಯಾಹಾರವನ್ನೇ ನೀಡಲಾಗುತ್ತಿದೆ. ಆದ್ದರಿಂದ ಜಿಲ್ಲಾಽಕಾರಿಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲಿ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

6 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

15 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

20 mins ago

ಗೌರಿ-ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಗೌರಿ ಹೂವು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…

26 mins ago

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

33 mins ago