ಓದುಗರ ಪತ್ರ
ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ ಪ್ರಶ್ನಿಸಿರುವ ಕೆಲವರು ಬಾಡೂಟ ಏಕಿಲ್ಲ? ಎಂದು ಕೇಳಿದ್ದಾರೆ.
ಈ ಬಗ್ಗೆ ಹೋರಾಟವೊಂದು ಪ್ರಾರಂಭ ವಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವನ್ನೂ ನೀಡುವಂತೆ ಮಂಡ್ಯ ಜಿಲ್ಲಾ ಽಕಾರಿಗೆ ಕೆಲವು ಸಂಘಟನೆಗಳು ಮನವಿ ಮಾಡಿವೆ. ಇದು ಸಮಂಜಸವಲ್ಲ.
ಸಮ್ಮೇಳನಕ್ಕೆ ಬರುವವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಇಲ್ಲಿ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ಬಾಡೂಟ ಸೇವನೆ ಮಾಡಲು ಇದೇನು ಮದುವೆ ಅಥವಾ ಇನ್ನಿತರ ವೈಯಕ್ತಿಕ ಕಾರ್ಯಕ್ರಮಗಳ ಔತಣಕೂಟವಲ್ಲ. ಸಾಹಿತ್ಯ ಎಂಬುದು ಕೂಡ ಸಾತ್ವಿಕ ಆಹಾರದಂತೆಯೇ. ಇಲ್ಲಿ ಉತ್ತಮ ಚರ್ಚೆಗಳಿಗೆ ಅವಕಾಶ ನೀಡಬೇಕೇ ವಿನಾ ಸಾಹಿತ್ಯ ಸಮ್ಮೇಳನ ಬಾಡೂಟದ ಅಡ್ಡೆಯಾಗುವುದು ಒಳ್ಳೆಯ ಬೆಳವಣಿಗೆಯಲ್ಲ. ಸಸ್ಯಾಹಾರ ಎಲ್ಲರೂ ಸೇವಿಸುವ ಆಹಾರವಾಗಿದ್ದು, ಎಲ್ಲ ಸಾರ್ವಜನಿಕ ಸಮ್ಮೇಳನಗಳು, ಕಾರ್ಯಕ್ರಮಗಳಲ್ಲಿಯೂ ಸಸ್ಯಾಹಾರವನ್ನೇ ನೀಡಲಾಗುತ್ತಿದೆ. ಆದ್ದರಿಂದ ಜಿಲ್ಲಾಽಕಾರಿಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲಿ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…