ಓದುಗರ ಪತ್ರ
ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ ಪ್ರಶ್ನಿಸಿರುವ ಕೆಲವರು ಬಾಡೂಟ ಏಕಿಲ್ಲ? ಎಂದು ಕೇಳಿದ್ದಾರೆ.
ಈ ಬಗ್ಗೆ ಹೋರಾಟವೊಂದು ಪ್ರಾರಂಭ ವಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವನ್ನೂ ನೀಡುವಂತೆ ಮಂಡ್ಯ ಜಿಲ್ಲಾ ಽಕಾರಿಗೆ ಕೆಲವು ಸಂಘಟನೆಗಳು ಮನವಿ ಮಾಡಿವೆ. ಇದು ಸಮಂಜಸವಲ್ಲ.
ಸಮ್ಮೇಳನಕ್ಕೆ ಬರುವವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಇಲ್ಲಿ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ಬಾಡೂಟ ಸೇವನೆ ಮಾಡಲು ಇದೇನು ಮದುವೆ ಅಥವಾ ಇನ್ನಿತರ ವೈಯಕ್ತಿಕ ಕಾರ್ಯಕ್ರಮಗಳ ಔತಣಕೂಟವಲ್ಲ. ಸಾಹಿತ್ಯ ಎಂಬುದು ಕೂಡ ಸಾತ್ವಿಕ ಆಹಾರದಂತೆಯೇ. ಇಲ್ಲಿ ಉತ್ತಮ ಚರ್ಚೆಗಳಿಗೆ ಅವಕಾಶ ನೀಡಬೇಕೇ ವಿನಾ ಸಾಹಿತ್ಯ ಸಮ್ಮೇಳನ ಬಾಡೂಟದ ಅಡ್ಡೆಯಾಗುವುದು ಒಳ್ಳೆಯ ಬೆಳವಣಿಗೆಯಲ್ಲ. ಸಸ್ಯಾಹಾರ ಎಲ್ಲರೂ ಸೇವಿಸುವ ಆಹಾರವಾಗಿದ್ದು, ಎಲ್ಲ ಸಾರ್ವಜನಿಕ ಸಮ್ಮೇಳನಗಳು, ಕಾರ್ಯಕ್ರಮಗಳಲ್ಲಿಯೂ ಸಸ್ಯಾಹಾರವನ್ನೇ ನೀಡಲಾಗುತ್ತಿದೆ. ಆದ್ದರಿಂದ ಜಿಲ್ಲಾಽಕಾರಿಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲಿ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…