ಓದುಗರ ಪತ್ರ

ಓದುಗರ ಪತ್ರ | ಎಂಡಿಎ ಜನರ ಕನಸುಗಳ ಸಾಕಾರಕ್ಕೆ ಮುಂದಾಗಲಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ವನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಎಂಬುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅಭಿವೃದ್ಧಿಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿರುವ ಮೈಸೂರು ಮತ್ತೊಂದು ಆಯಾಮಕ್ಕೆ ತೆರೆದುಕೊಳ್ಳಲು ಎಂಡಿಎ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ.

ಆದರೆ, ಯಾವುದೇ ಪ್ರಾಧಿಕಾರಾ ಜನಸ್ನೇಹಿಯಾಗಿ ರೂಪುಗೊಳ್ಳಬೇಕು. ಅಂದರೆ ಜನಸಾಮಾನ್ಯರನ್ನೂ ಒಳಗೊಳ್ಳುವುದು ಅಗತ್ಯ. ಮುಖ್ಯವಾಗಿ ಬಡವರು ಹಾಗೂ ಬಡತನವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಗತಿ ಎಂಬುದು ಕೇವಲ ಪ್ರವಾಸಿಗರು, ಉದ್ಯಮಿಗಳು, ಕೈಗಾರಿಕೆಗಳು, ಶ್ರೀಮಂತರನ್ನು ಗುರಿಯಾಗಿ ಇಟ್ಟುಕೊಳ್ಳಬಾರದು. ಅದು ಒಪ್ಪತ್ತು ಊಟಕ್ಕೂ ಕಷ್ಟಪಡುವಂತಹ ಜನರ ಬದುಕಿಗೆ ದಾರಿದೀಪವಾಗಬೇಕು. ಈ ಜನರಿಗೆ ಊಟ, ವಸತಿ, ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಎಂಡಿಎ ಯೋಜನೆಗಳು, ಕಾರ್ಯಕ್ರಮಗಳು ಇರಬೇಕು.

ಎಂಡಿಎನಲ್ಲಿ ಜನಪರ ಕಾಳಜಿ ಇರುವ ತಜ್ಞರು, ಹೋರಾಟಗಾರರಿಗೂ ಅವಕಾಶ ನೀಡಬೇಕು. ಅದರಲ್ಲಿಯೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಇರುವಂತಹ ನಾಯಕರು ಹಾಗೂ ಜನರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುವ ಸಂಯಮ ಇರುವಂತಹ ಅಧಿಕಾರಿಗಳು ಮೈಸೂರು ಅಭಿವೃದ್ಧಿಪ್ರಾಧಿಕಾರದಲ್ಲಿ ಇರುವಂತಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಂಭೀರ ಗಮನ ಹರಿಸಬೇಕು.

-ಆರ್. ವಿ. ಮಂಜುಳಾ, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago