ಯಳಂದೂರು ತಾಲ್ಲೂಕಿನ ಗೌಡಹಳ್ಳಿ ಹೊಸ ಉಪ್ಪಾರ ಬಡಾವಣೆ ನಿರ್ಮಾಣಗೊಂಡು ಸುಮಾರು ೨೦ ವರ್ಷಗಳೇ ಕಳೆದಿದ್ದರೂ ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಬೆರಳೆಣಿ ಯಷ್ಟು ವಿದ್ಯುತ್ ಕಂಬಗಳು, ರಸ್ತೆಗೆ ಕಲ್ಲು, ಮಣ್ಣು ಹಾಕಿದ್ದು ಬಿಟ್ಟರೆ ಬೇರೆ ಯಾವುದೇ ಮೂಲ ಸೌಕರ್ಯಗಳಿಲ್ಲದೆ ಜನರು ಪರ ದಾಡುವಂತಾಗಿತ್ತು.
ಇಲ್ಲಿನ ನಿವಾಸಿಗಳು ಮೂಲ ಸೌಕರ್ಯ ಗಳನ್ನು ಕಲ್ಪಿಸುವಂತೆ ಒತ್ತಾಯಿಸಿದ ಬಳಿಕ ಅರೆಬರೆ ಒಳಚರಂಡಿ ಕಾಮಗಾರಿಗಳು ನಡೆದದ್ದು ಬಿಟ್ಟರೆ ಬೇರ್ಯಾವುದೇ ಕಾಮಗಾರಿಯೂ ಇಲ್ಲಿ ನಡೆದಿರಲಿಲ್ಲ. ಈ ಬಡಾವಣೆಯಲ್ಲಿ ಸಮರ್ಪಕ ಒಳಚರಂಡಿ, ರಸ್ತೆಗಳಿಲ್ಲದ ಪರಿಣಾಮ ಮಳೆಗಾಲ ಬಂತು ಎಂದರೆ ಸಾಕು ಬಡಾವಣೆಯ ನಿವಾಸಿಗಳ ಪಾಡು ಹೇಳತೀರದಾಗಿತ್ತು. ಈ ಸಮಸ್ಯೆಗಳ ಕುರಿತು ಕೊಳ್ಳೇಗಾಲದ ಶಾಸಕ ಎ. ಆರ್. ಕೃಷ್ಣಮೂರ್ತಿಯವರ ಬಳಿ ಹೇಳಿಕೊಂಡು, ಮೂಲ ಸೌಕರ್ಯ ಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಲಾಗಿತ್ತು, ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ನಾಲ್ಕೆ ದು ತಿಂಗಳಲ್ಲೇ ಹೊಸ ಉಪ್ಪಾರ ಬಡಾವಣೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ನೀಡಿ ಬಡಾವಣೆಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಹೆಮ್ಮೆಯ ವಿಚಾರ.
ನಮ್ಮ ಮನವಿಗೆ ಸ್ಪಂದಿಸಿದ ಕೊಳ್ಳೇಗಾಲ ಶಾಸಕರಾದ ಎ. ಆರ್. ಕೃಷ್ಣಮೂರ್ತಿಯವರು ಅಭಿನಂದನಾರ್ಹರು. ಹಾಗೆಯೇ ಎಲ್ಲ ಕ್ಷೇತ್ರಗಳ ಶಾಸಕರೂ ಇವರಂತೆ ಸಾರ್ವಜನಿಕರಿಗೆ ಸ್ಪಂದಿಸುವಂತಾಗಬೇಕು. -ಗೌಡಹಳ್ಳಿ ಮಹೇಶ್, ಹೊಸ ಉಪ್ಪಾರ ಬಡಾವಣೆ, ಯಳಂದೂರು ತಾ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…