ಓದುಗರ ಪತ್ರ

ಓದುಗರ ಪತ್ರ | ಶಾಸಕರಿಗೆ ಎಆರ್‌ಕೆ ಮಾದರಿ

ಯಳಂದೂರು ತಾಲ್ಲೂಕಿನ ಗೌಡಹಳ್ಳಿ ಹೊಸ ಉಪ್ಪಾರ ಬಡಾವಣೆ ನಿರ್ಮಾಣಗೊಂಡು ಸುಮಾರು ೨೦ ವರ್ಷಗಳೇ ಕಳೆದಿದ್ದರೂ ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಬೆರಳೆಣಿ ಯಷ್ಟು ವಿದ್ಯುತ್ ಕಂಬಗಳು, ರಸ್ತೆಗೆ ಕಲ್ಲು, ಮಣ್ಣು ಹಾಕಿದ್ದು ಬಿಟ್ಟರೆ ಬೇರೆ ಯಾವುದೇ ಮೂಲ ಸೌಕರ್ಯಗಳಿಲ್ಲದೆ ಜನರು ಪರ ದಾಡುವಂತಾಗಿತ್ತು.

ಇಲ್ಲಿನ ನಿವಾಸಿಗಳು ಮೂಲ ಸೌಕರ್ಯ ಗಳನ್ನು ಕಲ್ಪಿಸುವಂತೆ ಒತ್ತಾಯಿಸಿದ ಬಳಿಕ ಅರೆಬರೆ ಒಳಚರಂಡಿ ಕಾಮಗಾರಿಗಳು ನಡೆದದ್ದು ಬಿಟ್ಟರೆ ಬೇರ‍್ಯಾವುದೇ ಕಾಮಗಾರಿಯೂ ಇಲ್ಲಿ ನಡೆದಿರಲಿಲ್ಲ. ಈ ಬಡಾವಣೆಯಲ್ಲಿ ಸಮರ್ಪಕ ಒಳಚರಂಡಿ, ರಸ್ತೆಗಳಿಲ್ಲದ ಪರಿಣಾಮ ಮಳೆಗಾಲ ಬಂತು ಎಂದರೆ ಸಾಕು ಬಡಾವಣೆಯ ನಿವಾಸಿಗಳ ಪಾಡು ಹೇಳತೀರದಾಗಿತ್ತು. ಈ ಸಮಸ್ಯೆಗಳ ಕುರಿತು ಕೊಳ್ಳೇಗಾಲದ ಶಾಸಕ ಎ. ಆರ್. ಕೃಷ್ಣಮೂರ್ತಿಯವರ ಬಳಿ ಹೇಳಿಕೊಂಡು, ಮೂಲ ಸೌಕರ್ಯ ಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಲಾಗಿತ್ತು, ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ನಾಲ್ಕೆ ದು ತಿಂಗಳಲ್ಲೇ ಹೊಸ ಉಪ್ಪಾರ ಬಡಾವಣೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ನೀಡಿ ಬಡಾವಣೆಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಹೆಮ್ಮೆಯ ವಿಚಾರ.

ನಮ್ಮ ಮನವಿಗೆ ಸ್ಪಂದಿಸಿದ ಕೊಳ್ಳೇಗಾಲ ಶಾಸಕರಾದ ಎ. ಆರ್. ಕೃಷ್ಣಮೂರ್ತಿಯವರು ಅಭಿನಂದನಾರ್ಹರು. ಹಾಗೆಯೇ ಎಲ್ಲ ಕ್ಷೇತ್ರಗಳ ಶಾಸಕರೂ ಇವರಂತೆ ಸಾರ್ವಜನಿಕರಿಗೆ ಸ್ಪಂದಿಸುವಂತಾಗಬೇಕು. -ಗೌಡಹಳ್ಳಿ ಮಹೇಶ್, ಹೊಸ ಉಪ್ಪಾರ ಬಡಾವಣೆ, ಯಳಂದೂರು ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago