ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ.
ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ ಅಧ್ಯಕ್ಷರಿಗೆ ಪರಮಾಧಿಕಾರ ನೀಡಲು ಅವಕಾಶ ಕಲ್ಪಿಸಲು ಹೊರಟಿದ್ದಾರೆ. ಈ ಬಗ್ಗೆ ಅವರನ್ನು ಪ್ರಶ್ನಿಸಿದರೆ ನಮ್ಮ ಸಂವಿಧಾನವನ್ನೇ ಆಗಾಗ ತಿದ್ದುಪಡಿ ಮಾಡುತ್ತಾರೆ, ನಮ್ಮ ಪರಿಷತ್ನ ಬೈಲಾ ತಿದ್ದುಪಡಿಯಾದರೆ ಏನು ಎಂದು ಉಡಾಫೆಯ ಉತ್ತರ ನೀಡುತ್ತಾರೆ.
ಹಲವಾರು ವರ್ಷಗಳಿಂದ ಪರಿಷತ್ ವತಿಯಿಂದ ಪ್ರಕಟವಾಗುತ್ತಿದ್ದ ‘ಕನ್ನಡ-ನುಡಿ’ ಮಾಸ ಪತ್ರಿಕೆ ಜೋಶಿ ಅವರು ಅಧ್ಯಕ್ಷರಾದ ನಂತರ ನಿಂತು ಹೋಯಿತು. ಇದರಿಂದಾಗಿ ಪರಿಷತ್ನ ಸದಸ್ಯರಿಗೆ ಸಿಗುತ್ತಿದ್ದ ಮಾಹಿತಿ ಸಿಗದಂತಾಗಿದೆ. ನಾಡಿನ ಹೆಸರಾಂತ ಸಾಹಿತಿಗಳು ಪರಿಷತ್ತಿನ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡುವ ಮೂಲಕ ಸರ್ವಾಧಿಕಾರಿ ಧೋರಣೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕನ್ನಡ ನಾಡಿನ ಅಸ್ಮಿತೆಯದ ಕನ್ನಡ ಸಾಹಿತ್ಯ ಪರಿಷತ್ ಉಳಿಯುವುದಿಲ್ಲ.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…