ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ.
ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ ಅಧ್ಯಕ್ಷರಿಗೆ ಪರಮಾಧಿಕಾರ ನೀಡಲು ಅವಕಾಶ ಕಲ್ಪಿಸಲು ಹೊರಟಿದ್ದಾರೆ. ಈ ಬಗ್ಗೆ ಅವರನ್ನು ಪ್ರಶ್ನಿಸಿದರೆ ನಮ್ಮ ಸಂವಿಧಾನವನ್ನೇ ಆಗಾಗ ತಿದ್ದುಪಡಿ ಮಾಡುತ್ತಾರೆ, ನಮ್ಮ ಪರಿಷತ್ನ ಬೈಲಾ ತಿದ್ದುಪಡಿಯಾದರೆ ಏನು ಎಂದು ಉಡಾಫೆಯ ಉತ್ತರ ನೀಡುತ್ತಾರೆ.
ಹಲವಾರು ವರ್ಷಗಳಿಂದ ಪರಿಷತ್ ವತಿಯಿಂದ ಪ್ರಕಟವಾಗುತ್ತಿದ್ದ ‘ಕನ್ನಡ-ನುಡಿ’ ಮಾಸ ಪತ್ರಿಕೆ ಜೋಶಿ ಅವರು ಅಧ್ಯಕ್ಷರಾದ ನಂತರ ನಿಂತು ಹೋಯಿತು. ಇದರಿಂದಾಗಿ ಪರಿಷತ್ನ ಸದಸ್ಯರಿಗೆ ಸಿಗುತ್ತಿದ್ದ ಮಾಹಿತಿ ಸಿಗದಂತಾಗಿದೆ. ನಾಡಿನ ಹೆಸರಾಂತ ಸಾಹಿತಿಗಳು ಪರಿಷತ್ತಿನ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡುವ ಮೂಲಕ ಸರ್ವಾಧಿಕಾರಿ ಧೋರಣೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕನ್ನಡ ನಾಡಿನ ಅಸ್ಮಿತೆಯದ ಕನ್ನಡ ಸಾಹಿತ್ಯ ಪರಿಷತ್ ಉಳಿಯುವುದಿಲ್ಲ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…