ಓದುಗರ ಪತ್ರ

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ ಕೇರಳ ರಾಜ್ಯದಲ್ಲಿ ಹೆಚ್ಚು ಹೆಚ್ಚು ಮಳೆಯಾಗಿರುವುದರಿಂದ ಕಬಿನಿ ಜಲಾಶಯವು ತುಂಬಿದೆ. ಆದರೆ ತಾರಕ ಜಲಾಶಯ ತುಂಬಬೇಕಾದರೆ ಇನ್ನು ಸಾಕಷ್ಟು ದಿನ ಬೇಕಾಗುತದೆ. ಆದ್ದರಿಂದ ಕಬಿನಿ ಜಲಾಶಯದಿಂದ ತಾರಕ ಜಲಾಶಯಕ್ಕೆ ನೀರನ್ನು ತುಂಬಿಸಬಹುದು.

ಆದರೆ ವಿದ್ಯುತ್ ಬಿಲ್ಲು ಬಾಕಿ ಇರುವುದರಿಂದ ವಿದ್ಯುತ್ ಸ್ಥಗಿತಗೊಳಿಸಲಾಗಿದ್ದು, ಇದರಿಂದ ಲಿಪ್ತಿಕೇಶನ್‌ಗೆ ಬಹಳ ಸಮಸ್ಯೆ ಆಗಿದೆ.

ಹಾಗೆಯೇ ಮಧ್ಯೆ ಮಧ್ಯೆ ನೀರಿನ ಪೈಪುಗಳು ದುರಸ್ತಿಯಲ್ಲಿವೆ. ಕಬಿನಿ ಜಲಾಶಯದಿಂದ ತಾರಕ ಜಲಾಶಯಕ್ಕೆ ನೀರನ್ನು ಬಿಟ್ಟರೆ, ಹೆಬ್ಬಾಳ ಜಲಾಶಯವು ತುಂಬಿಕೊಳ್ಳುತ್ತದೆ. ಇದರಿಂದ ಬೆಳಗನಹಳ್ಳಿ, ಕಾವಲ, ಹೈರಿಗೆ, ಮಾಲಾರ ಕಾಲೋನಿ, ಮಾದಾಪುರ, ದೇವರಾಜ್ ಕಾಲೋನಿ, ಕೋಳಗಾಲ, ಗುಜಪ್ಪನಹುಂಡಿ. ಹಾಗೂ ಇತರೆ ಗ್ರಾಮಗಳ ರೈತರು ಭತ್ತ, ಜೋಳ ಹಾಗೂ ಕಡಲೆಕಾಯಿ, ಕಬ್ಬು ಹಾಗೂ ಇತರೆ ಬೆಳೆಗಳನ್ನು ಬೆಳೆಯಲು ಅವಕಾಶ ಸಿಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಽಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು.

– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

1 hour ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

2 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

2 hours ago

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 day ago