ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ ಉದ್ಯಾನವಾಗಿದೆ. ಇಲ್ಲಿಗೆ ಪ್ರತಿ ದಿನ ನೂರಾರು ಹಿರಿಯ ನಾಗರಿಕರು, ಮಹಿಳೆಯರು ಬೆಳಿಗ್ಗೆ ಮತ್ತು ಸಂಜೆ ವಾಯು ವಿಹಾರಕ್ಕೆ ಬರುತ್ತಾರೆ.
ಈ ಉದ್ಯಾನದಲ್ಲಿ ಮಕ್ಕಳಿಗಾಗಿ ವಿಶೇಷ ಆಟದ ಉಪಕರಣಗಳಿದ್ದು ಮಕ್ಕಳೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಂತಹ ಕಡೆ ಶೌಚಾಲಯದ ವ್ಯವಸ್ಥೆ ಅತ್ಯಗತ್ಯ. ಆದರೆ ಇಲ್ಲಿ ಆ ವ್ಯವಸ್ಥೆ ಇಲ್ಲದೇ ಹಿರಿಯ ನಾಗರಿಕರು ಮತ್ತು ಮಹಿಳೆಯರು ಪರದಾಡುವಂತಾಗಿದೆ.
ಸಕ್ಕರೆ ಕಾಯಿಲೆ ಇರುವ ಹಿರಿಯ ನಾಗರಿಕರು, ಅರ್ಧ ಗಂಟೆ ವಾಕ್ ಮಾಡಿ ಶೌಚಕ್ಕೋಸ್ಕರ ಮನೆಗೆ ಹೋಗಿ, ಮತ್ತೆ ಬಂದು ವಾಕ್ ಮಾಡಬೇಕಾದ ಪರಿಸ್ಥಿತಿ ಇದೆ.
ಈ ಪಾರ್ಕ್ ವಿಶಾಲವಾಗಿದ್ದು, ಯಾವುದಾದರೂ ಒಂದು ಕಡೆ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಶೌಚಾಲಯದ ವ್ಯವಸ್ಥೆ ಮಾಡಬೇಕು. ಮೈಸೂರು ನಗರ ಪಾಲಿಕೆಯ ಆಯುಕ್ತರಾದ ಎಂ. ಕೆ. ಸವಿತಾ ಅವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
ಒಂದು ವೇಳೆ ಇದು ನಗರಪಾಲಿಕೆಯಿಂದ ಮಾಡಲು ಸಾಧ್ಯವಾಗದಿದ್ದರೆ, ಯಾರಾದರೂ ಸ್ಥಳೀಯ ದಾನಿಗಳಿಗೆ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು, ನಗರಪಾಲಿಕೆ ಅನುಮತಿ ನೀಡಿದರೇ, ನಾವೇ ನಿಂತು ಇಲ್ಲಿ ಶೌಚಾಲಯ ನಿರ್ಮಿಸಿ ಕೊಡುತ್ತೇವೆ. – ಬೂಕನಕೆರೆ ವಿಜೇಂದ್ರ, ಮೈಸೂರು
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…