ಓದುಗರ ಪತ್ರ
ಮೈಸೂರಿನ ರಾಮಕೃಷ್ಣ ನಗರದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದಲ್ಲಿರುವ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ
(ಕಬಿನಿ ಜಲಾಶಯ ಯೋಜನೆ)ಯ ಆವರಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದೆ.
ಇತ್ತೀಚೆಗೆ ನಾನು ಜಮೀನಿನ ಕಾಗದ ಪತ್ರಗಳನ್ನು ಸಿದ್ಧಪಡಿಸಲು ಮೈಸೂರಿನ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದಾಗ ಅಲ್ಲಿನ
ಅನೈರ್ಮಲ್ಯ ವಾತಾವರಣ ಕಂಡು ಬೇಸರವಾಯಿತು. ಈ ವಾಣಿಜ್ಯ ಸಂಕೀರ್ಣ ಆಂದೋಲನ ವೃತ್ತದಿಂದ ಕೇವಲ 100 ಮೀ. ದೂರ ದಲ್ಲಿದ್ದು, ಇದರ ಎದುರೇ ಉಪನೋಂದಣಾಧಿಕಾರಿ ಹಾಗೂ ವಿವಾಹ ನೋಂದ ಣಾಧಿಕಾರಿಗಳ ಕಚೇರಿಗಳೂ ಇವೆ.
ಇಲ್ಲಿಗೆ ಬರುವ ಸಾರ್ವಜನಿಕರು ತಮ್ಮ ಕಾಗದ ಪತ್ರಗಳನ್ನು ಮುಡಾ ವಾಣಿಜ್ಯ ಸಂಕೀರ್ಣದಲ್ಲಿರುವ ಪತ್ರ ಬರಹ ಗಾರರ ಕಚೇರಿಗಳಲ್ಲಿ ಮಾಡಿಸುತ್ತಾರೆ.
ಇದರಿಂದಾಗಿ ಈ ಕಟ್ಟಡ ಸದಾ ಜನನಿಬಿಡ ಪ್ರದೇಶವಾಗಿರುತ್ತದೆ. ಇಂತಹ ಕಟ್ಟಡದ ಆವರಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಎಲ್ಲೆಂದರಲ್ಲಿ ಹರಡಿಕೊಂಡಿವೆ. ಪಾಲಿಕೆ ಕಚೇರಿಯಿಂದ ದೂರವಿರುವ ಇಂತಹ ಸ್ಥಳಗಳನ್ನು ಸ್ವಚ್ಛಗೊಳಿಸುವುದನ್ನು
ಮರೆತಿದ್ದಾರೇನೋ ಎಂಬ ಅನುಮಾನ ಮೂಡುತ್ತದೆ. ಆದ್ದರಿಂದ ಸಂಬಂಧ ಪಟ್ಟವರು ಈ ಬಗ್ಗೆ ಗಮನಹರಿಸಿ ಈ ಕಟ್ಟಡದ ಸುತ್ತ ಸ್ವಚ್ಛತೆ ಕಾಪಾಡಬೇಕಿದೆ.
-ಕಾರ್ತಿಕ್, ಎಚ್.ಡಿ.ಕೋಟೆ ತಾ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…