Mysore
33
few clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಓದುಗರ ಪತ್ರ:  ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶನ ನೀಡಿ

ಓದುಗರ ಪತ್ರ

ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮುಂದೆ ಯಾವ ಕೋರ್ಸ್‌ಗಳನ್ನು ಅಭ್ಯಾಸ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯಿಲ್ಲದೇ ಗೊಂದಲಕ್ಕೊಳಗಾಗುತ್ತಿದ್ದಾರೆ. ತಂದೆ ತಾಯಿ ಇಲ್ಲದಿರುವ ಮಕ್ಕಳು, ಯಾರೂ ಇಲ್ಲದೆ ಒಂಟಿಯಾಗಿ ಜೀವನ ನಡೆಸುವ ಮಕ್ಕಳು ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸೂಕ್ತ ಮಾರ್ಗದರ್ಶನದ ಕೊರತೆಯಿರುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಬಗ್ಗೆ ನಿರ್ಧರಿಸಲು ವಿಫಲವಾಗಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೂ ಮುಂದಿನ ವ್ಯಾಸಂಗದ ಬಗ್ಗೆ ಆಸಕ್ತಿ ತೋರುವುದಿಲ್ಲ. ಆದ್ದರಿಂದ ಇಂತಹ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ನೀಡುವುದು ಅಗತ್ಯ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!