ಓದುಗರ ಪತ್ರ
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಭವನ ನಿರ್ಮಾಣಕ್ಕೆ ಜೆಎಸ್ಎಸ್ ಬಡಾವಣೆಯಲ್ಲಿ ಸಿಎ ನಿವೇಶನವನ್ನು ಮಂಜೂರು ಮಾಡಿದ್ದರು. ೨ ವರ್ಷಗಳ ಹಿಂದೆ ಭವನ ನಿರ್ಮಾಣಕ್ಕೆ ಬಸವ ಜಯಂತಿಯಂದು ಸುತ್ತೂರು ಶ್ರೀಗಳು ಚಾಲನೆಯನ್ನು ನೀಡಿದ್ದರು. ಅಂದಿನ ಕಾರ್ಯಕ್ರಮಕ್ಕೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಆಗಮಿಸಿದ್ದರು. ಆ ಸಂದರ್ಭದಲ್ಲಿ ಸರ್ಕಾರದಿಂದ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಿದಾಗ ಸಾಧ್ಯವಾದಷ್ಟು ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು.
ಆದರೆ ಅವರು ನೀಡಿದ್ದ ಭರವಸೆ ಈಡೇರದೇ ಇರುವುದು ಬೇಸರದ ಸಂಗತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ಭವನ ನಿರ್ಮಾಣಕ್ಕೆ ೧೦ ಕೋಟಿ ರೂ. ಅನುದಾನ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.
– ಪುಟ್ಟಣ್ಣ, ಅಧ್ಯಕ್ಷರು, ಬಸವ ಬಳಗ, ಸಿದ್ಧಾರ್ಥ ನಗರ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…