ಓದುಗರ ಪತ್ರ
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಭವನ ನಿರ್ಮಾಣಕ್ಕೆ ಜೆಎಸ್ಎಸ್ ಬಡಾವಣೆಯಲ್ಲಿ ಸಿಎ ನಿವೇಶನವನ್ನು ಮಂಜೂರು ಮಾಡಿದ್ದರು. ೨ ವರ್ಷಗಳ ಹಿಂದೆ ಭವನ ನಿರ್ಮಾಣಕ್ಕೆ ಬಸವ ಜಯಂತಿಯಂದು ಸುತ್ತೂರು ಶ್ರೀಗಳು ಚಾಲನೆಯನ್ನು ನೀಡಿದ್ದರು. ಅಂದಿನ ಕಾರ್ಯಕ್ರಮಕ್ಕೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಆಗಮಿಸಿದ್ದರು. ಆ ಸಂದರ್ಭದಲ್ಲಿ ಸರ್ಕಾರದಿಂದ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಿದಾಗ ಸಾಧ್ಯವಾದಷ್ಟು ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು.
ಆದರೆ ಅವರು ನೀಡಿದ್ದ ಭರವಸೆ ಈಡೇರದೇ ಇರುವುದು ಬೇಸರದ ಸಂಗತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ಭವನ ನಿರ್ಮಾಣಕ್ಕೆ ೧೦ ಕೋಟಿ ರೂ. ಅನುದಾನ ನೀಡಲು ಕ್ರಮ ಕೈಗೊಳ್ಳಬೇಕಾಗಿದೆ.
– ಪುಟ್ಟಣ್ಣ, ಅಧ್ಯಕ್ಷರು, ಬಸವ ಬಳಗ, ಸಿದ್ಧಾರ್ಥ ನಗರ, ಮೈಸೂರು
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…