ಓದುಗರ ಪತ್ರ
ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕರಾದ ಡಾ. ಸಲೀಂ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾನೂನಿನ ಅರಿವು ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ‘ಮನೆ ಮನೆಗೆ ಪೊಲೀಸ್’ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಶ್ಲಾಘನೀಯ.
ಪೊಲೀಸ್ ಇಲಾಖೆ ಎಂದರೆ ಭಯಪಡುವ ಜನರಿಗೆ ಪೊಲೀಸರೆಂದರೆ ಸದಾಕಾಲವೂ ಜನರ ಹಿತರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಇರುವವರು ಎಂಬ ಅರಿವು ಮೂಡಿಸಿ ಅವರಲ್ಲಿ ಆತ್ಮ ಸ್ಥೈರ್ಯವನ್ನು ತುಂಬುವ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಮನೆಮನೆಗೆ ತೆರಳಿ ಅವರಲ್ಲಿರುವ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಕಾನೂನಿನ ಚೌಕಟ್ಟಿನಲ್ಲಿ ನ್ಯಾಯ ಒದಗಿಸುವ ವಿಶೇಷ ಅಭಿಯಾನಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಜನಸಾಮಾನ್ಯರು ಮತ್ತು ಪೊಲೀಸರ ನಡುವಿನ ಬಾಂಧವ್ಯ ಉತ್ತಮವಾಗಿದ್ದರೆ ಕಾನೂನುಬಾಹಿರ ಚಟುವಟಿಕೆಗಳಿಗೆ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಬಹುದು.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…