ಓದುಗರ ಪತ್ರ | ‘ಆಪರೇಷನ್ ಸಿಂಧೂರ’ ಮಾಹಿತಿಯನ್ನು ಸರ್ಕಾರವೇ ಜನರಿಗೆ ನೀಡಲಿ

ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ನೆಲೆಯಲ್ಲಿ ಅಡಗಿರುವ ಉಗ್ರರನ್ನು ಭಾರತದ ಯೋಧರು ಸದೆಬಡಿಯುತ್ತಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನ ಕೂಡ ಭಾರತದ ಗಡಿಪ್ರದೇಶಗಳ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಎರಡೂ ದೇಶಗಳ ನಡುವಿನ ಯುದ್ಧದ ಬಗ್ಗೆ ಜನಸಾಮಾನ್ಯರಿಗೆ ವಾಸ್ತವ ವಿಷಯಗಳು ತಿಳಿಯುವಂತಾಗ ಬೇಕು, ಆದರೆ ಉಭಯ ದೇಶಗಳಲ್ಲಿ ನಡೆಯು ತ್ತಿರುವ ಬೆಳವಣಿಗೆಗಳ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ಸುದ್ದಿಗಳಲ್ಲಿ ವ್ಯತ್ಯಾಸ ಕಂಡುಬರುತ್ತಿದೆ.

ಇದನ್ನೂ ಓದಿ:- ಇಂದು ಅರಮನೆ ಅಂಗಳದಲ್ಲಿ ಮಾಕ್‌ಡ್ರಿಲ್‌

ಯುದ್ಧಭೀತಿ ಹಳ್ಳಿಗಳ ಜನರಲ್ಲಿ ಸಹಜವಾಗಿ ಆತಂಕವನ್ನು ಉಂಟು ಮಾಡುತ್ತದೆ. ಪಾಕಿಸ್ತಾನದಲ್ಲಿನ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿರುವುದಿಲ್ಲ. ಯುದ್ಧ ನಡೆದರೆ ಉಭಯ ದೇಶಗಳಲ್ಲೂ ಸಾವು- ನೋವು ಹೆಚ್ಚಾಗಲಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ೨೬ ಮಂದಿ ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಜನರಲ್ಲಿ ಆಕ್ರೋಶ ಇದೆ. ಆ ಭಯೋತ್ಪಾದಕರನ್ನು ಮಟ್ಟಹಾಕಬೇಕೆಂಬ ಕಡುಕೋಪ ಇದೆ. ಅದಕ್ಕಿಂತ ಹೆಚ್ಚಾಗಿ ಅಮಾಯಕ ಜನರ ಪ್ರಾಣಕ್ಕೆ ಸಂಚಕಾರ ಉಂಟಾಗಬಾರದು ಎಂಬ ಆಶಯ ಬಹುತೇಕ ಜನರಲ್ಲಿ ಇದೆ. ಹಾಗಾಗಿ ಭಾರತೀಯ ಸೇನಾಪಡೆಗಳು ನಡೆಸುವ ಕಾರ್ಯಾಚರಣೆಗಳ ಬಗ್ಗೆ ಸರ್ಕಾರವೇ ಜನರಿಗೆ ನೇರವಾಗಿ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸುವುದು ಸೂಕ್ತ.

-ಪ್ರಣವಮೂರ್ತಿ, ಸರಸ್ವತಿಪುರಂ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

46 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

48 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

51 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

54 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

59 mins ago