ಓದುಗರ ಪತ್ರ | ‘ಆಪರೇಷನ್ ಸಿಂಧೂರ’ ಮಾಹಿತಿಯನ್ನು ಸರ್ಕಾರವೇ ಜನರಿಗೆ ನೀಡಲಿ

ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ನೆಲೆಯಲ್ಲಿ ಅಡಗಿರುವ ಉಗ್ರರನ್ನು ಭಾರತದ ಯೋಧರು ಸದೆಬಡಿಯುತ್ತಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನ ಕೂಡ ಭಾರತದ ಗಡಿಪ್ರದೇಶಗಳ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಎರಡೂ ದೇಶಗಳ ನಡುವಿನ ಯುದ್ಧದ ಬಗ್ಗೆ ಜನಸಾಮಾನ್ಯರಿಗೆ ವಾಸ್ತವ ವಿಷಯಗಳು ತಿಳಿಯುವಂತಾಗ ಬೇಕು, ಆದರೆ ಉಭಯ ದೇಶಗಳಲ್ಲಿ ನಡೆಯು ತ್ತಿರುವ ಬೆಳವಣಿಗೆಗಳ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ಸುದ್ದಿಗಳಲ್ಲಿ ವ್ಯತ್ಯಾಸ ಕಂಡುಬರುತ್ತಿದೆ.

ಇದನ್ನೂ ಓದಿ:- ಇಂದು ಅರಮನೆ ಅಂಗಳದಲ್ಲಿ ಮಾಕ್‌ಡ್ರಿಲ್‌

ಯುದ್ಧಭೀತಿ ಹಳ್ಳಿಗಳ ಜನರಲ್ಲಿ ಸಹಜವಾಗಿ ಆತಂಕವನ್ನು ಉಂಟು ಮಾಡುತ್ತದೆ. ಪಾಕಿಸ್ತಾನದಲ್ಲಿನ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿರುವುದಿಲ್ಲ. ಯುದ್ಧ ನಡೆದರೆ ಉಭಯ ದೇಶಗಳಲ್ಲೂ ಸಾವು- ನೋವು ಹೆಚ್ಚಾಗಲಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ೨೬ ಮಂದಿ ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಜನರಲ್ಲಿ ಆಕ್ರೋಶ ಇದೆ. ಆ ಭಯೋತ್ಪಾದಕರನ್ನು ಮಟ್ಟಹಾಕಬೇಕೆಂಬ ಕಡುಕೋಪ ಇದೆ. ಅದಕ್ಕಿಂತ ಹೆಚ್ಚಾಗಿ ಅಮಾಯಕ ಜನರ ಪ್ರಾಣಕ್ಕೆ ಸಂಚಕಾರ ಉಂಟಾಗಬಾರದು ಎಂಬ ಆಶಯ ಬಹುತೇಕ ಜನರಲ್ಲಿ ಇದೆ. ಹಾಗಾಗಿ ಭಾರತೀಯ ಸೇನಾಪಡೆಗಳು ನಡೆಸುವ ಕಾರ್ಯಾಚರಣೆಗಳ ಬಗ್ಗೆ ಸರ್ಕಾರವೇ ಜನರಿಗೆ ನೇರವಾಗಿ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸುವುದು ಸೂಕ್ತ.

-ಪ್ರಣವಮೂರ್ತಿ, ಸರಸ್ವತಿಪುರಂ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

2 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

7 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

11 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

11 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

11 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

14 hours ago