ಓದುಗರ ಪತ್ರ | ‘ಆಪರೇಷನ್ ಸಿಂಧೂರ’ ಮಾಹಿತಿಯನ್ನು ಸರ್ಕಾರವೇ ಜನರಿಗೆ ನೀಡಲಿ

ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ನೆಲೆಯಲ್ಲಿ ಅಡಗಿರುವ ಉಗ್ರರನ್ನು ಭಾರತದ ಯೋಧರು ಸದೆಬಡಿಯುತ್ತಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನ ಕೂಡ ಭಾರತದ ಗಡಿಪ್ರದೇಶಗಳ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಎರಡೂ ದೇಶಗಳ ನಡುವಿನ ಯುದ್ಧದ ಬಗ್ಗೆ ಜನಸಾಮಾನ್ಯರಿಗೆ ವಾಸ್ತವ ವಿಷಯಗಳು ತಿಳಿಯುವಂತಾಗ ಬೇಕು, ಆದರೆ ಉಭಯ ದೇಶಗಳಲ್ಲಿ ನಡೆಯು ತ್ತಿರುವ ಬೆಳವಣಿಗೆಗಳ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ಸುದ್ದಿಗಳಲ್ಲಿ ವ್ಯತ್ಯಾಸ ಕಂಡುಬರುತ್ತಿದೆ.

ಇದನ್ನೂ ಓದಿ:- ಇಂದು ಅರಮನೆ ಅಂಗಳದಲ್ಲಿ ಮಾಕ್‌ಡ್ರಿಲ್‌

ಯುದ್ಧಭೀತಿ ಹಳ್ಳಿಗಳ ಜನರಲ್ಲಿ ಸಹಜವಾಗಿ ಆತಂಕವನ್ನು ಉಂಟು ಮಾಡುತ್ತದೆ. ಪಾಕಿಸ್ತಾನದಲ್ಲಿನ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿರುವುದಿಲ್ಲ. ಯುದ್ಧ ನಡೆದರೆ ಉಭಯ ದೇಶಗಳಲ್ಲೂ ಸಾವು- ನೋವು ಹೆಚ್ಚಾಗಲಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ೨೬ ಮಂದಿ ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಜನರಲ್ಲಿ ಆಕ್ರೋಶ ಇದೆ. ಆ ಭಯೋತ್ಪಾದಕರನ್ನು ಮಟ್ಟಹಾಕಬೇಕೆಂಬ ಕಡುಕೋಪ ಇದೆ. ಅದಕ್ಕಿಂತ ಹೆಚ್ಚಾಗಿ ಅಮಾಯಕ ಜನರ ಪ್ರಾಣಕ್ಕೆ ಸಂಚಕಾರ ಉಂಟಾಗಬಾರದು ಎಂಬ ಆಶಯ ಬಹುತೇಕ ಜನರಲ್ಲಿ ಇದೆ. ಹಾಗಾಗಿ ಭಾರತೀಯ ಸೇನಾಪಡೆಗಳು ನಡೆಸುವ ಕಾರ್ಯಾಚರಣೆಗಳ ಬಗ್ಗೆ ಸರ್ಕಾರವೇ ಜನರಿಗೆ ನೇರವಾಗಿ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸುವುದು ಸೂಕ್ತ.

-ಪ್ರಣವಮೂರ್ತಿ, ಸರಸ್ವತಿಪುರಂ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

25 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

27 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

29 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

30 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

32 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

36 mins ago