ಓದುಗರ ಪತ್ರ
ಮೈಸೂರಿನ ಚಾಮರಾಜ ಡಬ್ಬಲ್ ರಸ್ತೆ (ರಾಮಸ್ವಾಮಿ ಸರ್ಕಲ್) ಸಮೀಪದ ವೆಂಕಟಾಚಲ ಧಾಮ(ರಾಘವೇಂದ್ರ ಸ್ವಾಮಿಗಳ ಮಠ)ದ ಹಿಂದಿರುವ ಮನೆಗಳು ಹಾಗೂ ಡಿ. ಸುಬ್ಬಯ್ಯ ರಸ್ತೆಯ ಕೆಲವು ಮನೆಗಳಿಗೆ ಕಳೆದೊಂದು ವಾರದಿಂದ ಸಮರ್ಪಕವಾಗಿ ನೀರು ಸರಬರಾಜಾಗದೇ ಜನರು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ನೀರು ತರಲು ಸಮಯ ಮೀಸಲಿಡ ಬೇಕಾಗಿದೆ.
ವಾರ್ಡ್ ಕಾರ್ಪೊರೇಟರ್ ಅಧಿಕಾರಾವಧಿ ಮುಗಿದ್ದು ಅವರನ್ನು ಪ್ರಶ್ನಿಸುವಂತಿಲ್ಲ. ಶಾಸಕ ಹರೀಶ್ಗೌಡರು ಒಮ್ಮೆ ಪಾದಯಾತ್ರೆ ಮಾಡಿದ್ದನ್ನು ಬಿಟ್ಟರೆ ಇತ್ತಕಡೆ ಬಂದೇ ಇಲ್ಲ. ಇನ್ನು ವಾಣಿ ವಿಲಾಸ ನೀರು ಸರಬರಾಜು
ಕೇಂದ್ರದ ಅಧಿಕಾರಿಗಳನ್ನು ಕೇಳಿದರೆ ನಿಮ್ಮ ಭಾಗದ ನೀರು ಸರಬರಾಜು ಕೊಳವೆಯಲ್ಲಿ ಏನೋ ಸಮಸ್ಯೆಯಿದೆ, ಗಮನಿಸಿಕೊಳ್ಳಿ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಾರೆ.
ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ನಾಣ್ಣುಡಿಯಂತೆ ಜನಪ್ರತಿನಿಧಿಗಳು ಹಾಗೂ
ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರು ನೀರಿಲ್ಲದೇ ಪರಿತಪಿಸುವಂತಾಗಿದೆ. ನೀರಿನ ಕಂದಾಯ ವಸೂಲಿಯಷ್ಟೇ ನೀರು ಸರಬರಾಜೂ ಮುಖ್ಯ ಎಂಬುದನ್ನರಿತು ಸಂಬಂಧಪಟ್ಟವರು ಕೂಡಲೇ ನೀರಿನ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ವೇಣುಗೋಪಾಲ್, ಡಿ.ಸುಬ್ಬಯ್ಯ ರಸ್ತೆ, ಮೈಸೂರು.
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…