ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮತ್ತು ಬಿಜೆಪಿ-ಜಾ. ದಳ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಪೈಪೋಟಿ ಎದುರಾಗಿದ್ದು, ಇಬ್ಬರ ಪರವಾಗಿಯೂ ಬೆಟ್ಟಿಂಗ್ ಜೋರಾಗಿದೆ. ಈ ಇಬ್ಬರೂ ಅಭ್ಯರ್ಥಿಗಳ ಪರವಾಗಿ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಮುಂಬೈ, ಕೊಲ್ಕತ್ತಾ, ಚೆನ್ನೆ ನಂತಹ ನಗರಗಳಲ್ಲಿಯೂ ಬೆಟ್ಟಿಂಗ್ ನಡೆಯುತ್ತಿದೆ ಎಂಬುದಾಗಿ ವರದಿಯಾಗಿದ್ದು, ಇದು ಆತಂಕಕಾರಿ ಬೆಳವಣಿಯಾಗಿದೆ. ಬೆಟ್ಟಿಂಗ್ ದಂಧೆ ಬಹಿರಂಗವಾಗಿಯೇ ನಡೆಯುತ್ತಿದ್ದರೂ ಸರ್ಕಾರ ಅವುಗಳಿಗೆ ಕಡಿವಾಣ ಹಾಕಲು ಮುಂದಾಗಿಲ್ಲ.
ಚುನಾವಣಾ ಆಯೋಗವೂ ಈ ಬಗ್ಗೆ ಕ್ರಮಕೈಗೊಳ್ಳದಿರುವುದು ಬೇಸರದ ಸಂಗತಿ. ಇಂತಹ ಬೆಳವಣಿಗೆಗಳು ಸಮಾಜಕ್ಕೆ ಮಾರಕವಾಗಲಿದೆ. ಅನೇ ಕ ಮಂದಿ ಹಣ ಮಾತ್ರವಲ್ಲದೇ ತಮ್ಮ ಜಮೀನು, ಮನೆಗಳನ್ನೂ ಅಡವಿಟ್ಟಿದ್ದಾರೆ. ಸೋತವರು ಎಲ್ಲವನ್ನೂ ಕಳೆದುಕೊಂಡು ದಿವಾಳಿಯಾಗು ತ್ತಾರೆ. ಯಾವುದೇ ರೀತಿಯ ಬೆಟ್ಟಿಂಗ್ ಆದರೂ ಅದು ಕಾನೂನು ಬಾಹಿರ. ಅಲ್ಲದೆ ಸಾಕಷ್ಟು ಕುಟುಂಬಗಳು ಬೀದಿಗೆ ಬೀಳುತ್ತವೆ. ಆದ್ದರಿಂದ ಪೊಲೀಸ್ ಇಲಾಖೆಯು ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…
ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…
ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…