ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮತ್ತು ಬಿಜೆಪಿ-ಜಾ. ದಳ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಪೈಪೋಟಿ ಎದುರಾಗಿದ್ದು, ಇಬ್ಬರ ಪರವಾಗಿಯೂ ಬೆಟ್ಟಿಂಗ್ ಜೋರಾಗಿದೆ. ಈ ಇಬ್ಬರೂ ಅಭ್ಯರ್ಥಿಗಳ ಪರವಾಗಿ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಮುಂಬೈ, ಕೊಲ್ಕತ್ತಾ, ಚೆನ್ನೆ ನಂತಹ ನಗರಗಳಲ್ಲಿಯೂ ಬೆಟ್ಟಿಂಗ್ ನಡೆಯುತ್ತಿದೆ ಎಂಬುದಾಗಿ ವರದಿಯಾಗಿದ್ದು, ಇದು ಆತಂಕಕಾರಿ ಬೆಳವಣಿಯಾಗಿದೆ. ಬೆಟ್ಟಿಂಗ್ ದಂಧೆ ಬಹಿರಂಗವಾಗಿಯೇ ನಡೆಯುತ್ತಿದ್ದರೂ ಸರ್ಕಾರ ಅವುಗಳಿಗೆ ಕಡಿವಾಣ ಹಾಕಲು ಮುಂದಾಗಿಲ್ಲ.

ಚುನಾವಣಾ ಆಯೋಗವೂ ಈ ಬಗ್ಗೆ ಕ್ರಮಕೈಗೊಳ್ಳದಿರುವುದು ಬೇಸರದ ಸಂಗತಿ. ಇಂತಹ ಬೆಳವಣಿಗೆಗಳು ಸಮಾಜಕ್ಕೆ ಮಾರಕವಾಗಲಿದೆ. ಅನೇ ಕ ಮಂದಿ ಹಣ ಮಾತ್ರವಲ್ಲದೇ ತಮ್ಮ ಜಮೀನು, ಮನೆಗಳನ್ನೂ ಅಡವಿಟ್ಟಿದ್ದಾರೆ. ಸೋತವರು ಎಲ್ಲವನ್ನೂ ಕಳೆದುಕೊಂಡು ದಿವಾಳಿಯಾಗು ತ್ತಾರೆ. ಯಾವುದೇ ರೀತಿಯ ಬೆಟ್ಟಿಂಗ್ ಆದರೂ ಅದು ಕಾನೂನು ಬಾಹಿರ. ಅಲ್ಲದೆ ಸಾಕಷ್ಟು ಕುಟುಂಬಗಳು ಬೀದಿಗೆ ಬೀಳುತ್ತವೆ. ಆದ್ದರಿಂದ ಪೊಲೀಸ್ ಇಲಾಖೆಯು ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

1 hour ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

5 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

5 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

5 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

5 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

5 hours ago