ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮತ್ತು ಬಿಜೆಪಿ-ಜಾ. ದಳ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಪೈಪೋಟಿ ಎದುರಾಗಿದ್ದು, ಇಬ್ಬರ ಪರವಾಗಿಯೂ ಬೆಟ್ಟಿಂಗ್ ಜೋರಾಗಿದೆ. ಈ ಇಬ್ಬರೂ ಅಭ್ಯರ್ಥಿಗಳ ಪರವಾಗಿ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಮುಂಬೈ, ಕೊಲ್ಕತ್ತಾ, ಚೆನ್ನೆ ನಂತಹ ನಗರಗಳಲ್ಲಿಯೂ ಬೆಟ್ಟಿಂಗ್ ನಡೆಯುತ್ತಿದೆ ಎಂಬುದಾಗಿ ವರದಿಯಾಗಿದ್ದು, ಇದು ಆತಂಕಕಾರಿ ಬೆಳವಣಿಯಾಗಿದೆ. ಬೆಟ್ಟಿಂಗ್ ದಂಧೆ ಬಹಿರಂಗವಾಗಿಯೇ ನಡೆಯುತ್ತಿದ್ದರೂ ಸರ್ಕಾರ ಅವುಗಳಿಗೆ ಕಡಿವಾಣ ಹಾಕಲು ಮುಂದಾಗಿಲ್ಲ.
ಚುನಾವಣಾ ಆಯೋಗವೂ ಈ ಬಗ್ಗೆ ಕ್ರಮಕೈಗೊಳ್ಳದಿರುವುದು ಬೇಸರದ ಸಂಗತಿ. ಇಂತಹ ಬೆಳವಣಿಗೆಗಳು ಸಮಾಜಕ್ಕೆ ಮಾರಕವಾಗಲಿದೆ. ಅನೇ ಕ ಮಂದಿ ಹಣ ಮಾತ್ರವಲ್ಲದೇ ತಮ್ಮ ಜಮೀನು, ಮನೆಗಳನ್ನೂ ಅಡವಿಟ್ಟಿದ್ದಾರೆ. ಸೋತವರು ಎಲ್ಲವನ್ನೂ ಕಳೆದುಕೊಂಡು ದಿವಾಳಿಯಾಗು ತ್ತಾರೆ. ಯಾವುದೇ ರೀತಿಯ ಬೆಟ್ಟಿಂಗ್ ಆದರೂ ಅದು ಕಾನೂನು ಬಾಹಿರ. ಅಲ್ಲದೆ ಸಾಕಷ್ಟು ಕುಟುಂಬಗಳು ಬೀದಿಗೆ ಬೀಳುತ್ತವೆ. ಆದ್ದರಿಂದ ಪೊಲೀಸ್ ಇಲಾಖೆಯು ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…