ಓದುಗರ ಪತ್ರ

ಕಮಿಷನ್ ದಂಧೆಗೆ ಕಡಿವಾಣ ಹಾಕಿ

ರಾಷ್ಟ್ರೀಯ ತುರ್ತು ಸೇವಾ ಆಂಬ್ಯುಲೆನ್ಸ್ ಗ್ರಾಮಾಂತರ ಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗಳಿಗೆ ರವಾನಿಸಲು ಅನುಕೂಲಕರವಾಗಿದೆ.

ಈ ಆಂಬ್ಯುಲೆನ್ಸ್‌ಗಳು ರೋಗಿ ಗಳನ್ನು ಆದಷ್ಟೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು ಎಂಬ ನಿಯಮವಿದೆ. ಆದರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಎನ್‌ಎಎಸ್ ಆಂಬ್ಯುಲೆನ್ಸ್ ಚಾಲಕರು ಅನೇಕ ಸಂದರ್ಭಗಳಲ್ಲಿ ಇಲ್ಲಸಲ್ಲದ ಸಬೂಬು ಹೇಳಿ ತಮಗೆ ಬೇಕಾದ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ರವಾನಿಸುವ ಚಾಳಿಯನ್ನು ರೂಢಿಸಿಕೊಂಡಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆಯ ನಿಟ್ರೆ ಗ್ರಾಮದ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸರ್ಕಾರಿ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ ಎಂದು ಹೇಳಿ ಅವರನ್ನು ಒತ್ತಾಯಪೂರ್ವಕವಾಗಿಯೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಗುಂಡ್ಲುಪೇಟೆಯ ಬಾಚಹಳ್ಳಿ ಗ್ರಾಮದ ಅಭಿಷೇಕ್ ಎಂಬ ಗಾಯಾಳುವನ್ನೂ ಸರ್ಕಾರಿ ಆಸ್ಪತ್ರೆಯ ಬದಲು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಸ್ವತಃ ಕುಟುಂಬಸ್ಥರೇ ತಿಳಿಸಿದ್ದಾರೆ. ಇತ್ತೀಚೆಗೆ ಈ ಆಂಬ್ಯುಲೆನ್ಸ್‌ಗಳ ಚಾಲಕರು ಖಾಸಗಿ ಆಸ್ಪತ್ರೆಗಳು ನೀಡುವ ಕಮಿಷನ್ ಆಸೆಗಾಗಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿರುವ ಅನೇಕ ಉದಾಹರಣೆಗಳಿವೆ. ತುರ್ತು ಸಂದರ್ಭವನ್ನೇ ಬಳಸಿಕೊಂಡು ಅವರನ್ನು ಖಾಸಗಿ ಆಸ್ಪತ್ರೆಗಳಿಗೆ ರವಾನಿಸುವುದು ಎಷ್ಟು ಸರಿ? ಬಡರೋಗಿಗಳು ಅಽಕ ಹಣ ಪಾವತಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಸಾಧ್ಯವೇ? ಮೈಸೂರು ಹಾಗೂ ಚಾಮರಾಜನಗರದ ಜಿಲ್ಲಾಧಿಗಳು ಈ ಬಗ್ಗೆ ತನಿಖೆ ನಡೆಸಿ ಕಮಿಷನ್ ಆಸೆಗಾಗಿ ರೋಗಿ ಗಳಿಗೆ ತೊಂದರೆ ನೀಡುತ್ತಿರುವ ಎನ್‌ಎಎಸ್ ಚಾಲಕರ ವಿರುದ್ಧ ಕ್ರಮ ಜರುಗಿಸಬೇಕಿದೆ. -ದಾಸನೂರು ಕೂಸಣ್ಣ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

46 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

54 mins ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

2 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago