ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಶೀರನಹುಂಡಿ ಗ್ರಾಮದ ಬದಿಯಲ್ಲಿರುವ ತಾರಕ ಜಲಾಶಯದ ಬಲದಂಡೆ ನಾಲೆ (ಶೀರನಹುಂಡಿ ಕಾಲುವೆ)ಗೆ ನಿತ್ಯ ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ದುರ್ವಾಸನೆ
ಬೀರಲಾರಂಭಿಸಿದೆ.
ಈ ಕಾಲುವೆಗೆ ತಂದು ಸುರಿಯುತ್ತಿರುವ ಮಾಂಸದ ತ್ಯಾಜ್ಯ ಹಾಗೂ ಮೂಳೆಗಳನ್ನು ಗಮನಿಸಿದರೆ, ಮಾಂಸಕ್ಕಾಗಿ ಗೋ-ಹತ್ಯೆ ಮಾಡಿ ಅದರ ತ್ಯಾಜ್ಯವನ್ನು ಇಲ್ಲಿ ತಂದು ಬೀಸಾಡುತ್ತಿರಬಹುದು ಅನಿಸುತ್ತದೆ. ಈ
ತ್ಯಾಜ್ಯದಿಂದಾಗಿ ಈ ಭಾಗದಲ್ಲಿ ದುರ್ವಾಸನೆ ಹೆಚ್ಚಾಗುವ ಜತೆಗೆ ಮಾಂಸದ ತ್ಯಾಜ್ಯ ತಿನ್ನಲು ಕಾಡುಪ್ರಾಣಿಗಳು ಬರುವ ಆತಂಕವೂ ಎದುರಾಗಿದೆ. ಈ ಕಾಲುವೆ ಮೇಲಿನ ರಸ್ತೆಯ ಮೂಲಕವೇ ಜನರು ಜಮೀನುಗಳಿಗೆ ಹೋಗಬೇಕಿದ್ದು, ದುರ್ವಾಸನೆಯನ್ನು ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡಬೇಕಿದೆ.
ಅಲ್ಲದೆ ಕಾಲುವೆಗಳನ್ನು ಸ್ವಚ್ಛಗೊಳಿಸದ ಪರಿಣಾಮ ಕಾಲುವೆಗಳ ಒಳಗೆ ಗಿಡಗಂಟಿಗಳು ಮಾತ್ರವಲ್ಲದೇ ಮರಗಳೂ ಬೆಳೆದುಕೊಂಡಿದ್ದು, ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಕಾಲುವೆಗಳನ್ನು ಸ್ವಚ್ಛಗೊಳಿಸುವ ಜತೆಗೆ ಕಾಲುವೆಗೆ ಮಾಂಸದ ತ್ಯಾಜ್ಯವನ್ನು ತಂದು ಸುರಿಯುವವರಿಗೆ ಕಡಿವಾಣ ಹಾಕಬೇಕಿದೆ.
-ಪ್ರಶಾಂತ್, ಎಚ್.ಡಿ.ಕೋಟೆ ತಾ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…