ಓದುಗರ ಪತ್ರ

ಓದುಗರ ಪತ್ರ: ಮಾಂಸದ ತ್ಯಾಜ್ಯ ಸುರಿಯುವವರಿಗೆ ಕಡಿವಾಣ ಹಾಕಿ

ಎಚ್.ಡಿ.ಕೋಟೆ ತಾಲ್ಲೂಕಿನ ಶೀರನಹುಂಡಿ ಗ್ರಾಮದ ಬದಿಯಲ್ಲಿರುವ ತಾರಕ ಜಲಾಶಯದ ಬಲದಂಡೆ ನಾಲೆ (ಶೀರನಹುಂಡಿ ಕಾಲುವೆ)ಗೆ ನಿತ್ಯ ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ದುರ್ವಾಸನೆ
ಬೀರಲಾರಂಭಿಸಿದೆ.

ಈ ಕಾಲುವೆಗೆ ತಂದು ಸುರಿಯುತ್ತಿರುವ ಮಾಂಸದ ತ್ಯಾಜ್ಯ ಹಾಗೂ ಮೂಳೆಗಳನ್ನು ಗಮನಿಸಿದರೆ, ಮಾಂಸಕ್ಕಾಗಿ ಗೋ-ಹತ್ಯೆ ಮಾಡಿ ಅದರ ತ್ಯಾಜ್ಯವನ್ನು ಇಲ್ಲಿ ತಂದು ಬೀಸಾಡುತ್ತಿರಬಹುದು ಅನಿಸುತ್ತದೆ. ಈ
ತ್ಯಾಜ್ಯದಿಂದಾಗಿ ಈ ಭಾಗದಲ್ಲಿ ದುರ್ವಾಸನೆ ಹೆಚ್ಚಾಗುವ ಜತೆಗೆ ಮಾಂಸದ ತ್ಯಾಜ್ಯ ತಿನ್ನಲು ಕಾಡುಪ್ರಾಣಿಗಳು ಬರುವ ಆತಂಕವೂ ಎದುರಾಗಿದೆ. ಈ ಕಾಲುವೆ ಮೇಲಿನ ರಸ್ತೆಯ ಮೂಲಕವೇ ಜನರು ಜಮೀನುಗಳಿಗೆ ಹೋಗಬೇಕಿದ್ದು, ದುರ್ವಾಸನೆಯನ್ನು ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡಬೇಕಿದೆ.

ಅಲ್ಲದೆ ಕಾಲುವೆಗಳನ್ನು ಸ್ವಚ್ಛಗೊಳಿಸದ ಪರಿಣಾಮ ಕಾಲುವೆಗಳ ಒಳಗೆ ಗಿಡಗಂಟಿಗಳು ಮಾತ್ರವಲ್ಲದೇ ಮರಗಳೂ ಬೆಳೆದುಕೊಂಡಿದ್ದು, ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಕಾಲುವೆಗಳನ್ನು ಸ್ವಚ್ಛಗೊಳಿಸುವ ಜತೆಗೆ ಕಾಲುವೆಗೆ ಮಾಂಸದ ತ್ಯಾಜ್ಯವನ್ನು ತಂದು ಸುರಿಯುವವರಿಗೆ ಕಡಿವಾಣ ಹಾಕಬೇಕಿದೆ.

-ಪ್ರಶಾಂತ್, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago