ಓದುಗರ ಪತ್ರ

ಓದುಗರ ಪತ್ರ: ಮಾಂಸದ ತ್ಯಾಜ್ಯ ಸುರಿಯುವವರಿಗೆ ಕಡಿವಾಣ ಹಾಕಿ

ಎಚ್.ಡಿ.ಕೋಟೆ ತಾಲ್ಲೂಕಿನ ಶೀರನಹುಂಡಿ ಗ್ರಾಮದ ಬದಿಯಲ್ಲಿರುವ ತಾರಕ ಜಲಾಶಯದ ಬಲದಂಡೆ ನಾಲೆ (ಶೀರನಹುಂಡಿ ಕಾಲುವೆ)ಗೆ ನಿತ್ಯ ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ದುರ್ವಾಸನೆ
ಬೀರಲಾರಂಭಿಸಿದೆ.

ಈ ಕಾಲುವೆಗೆ ತಂದು ಸುರಿಯುತ್ತಿರುವ ಮಾಂಸದ ತ್ಯಾಜ್ಯ ಹಾಗೂ ಮೂಳೆಗಳನ್ನು ಗಮನಿಸಿದರೆ, ಮಾಂಸಕ್ಕಾಗಿ ಗೋ-ಹತ್ಯೆ ಮಾಡಿ ಅದರ ತ್ಯಾಜ್ಯವನ್ನು ಇಲ್ಲಿ ತಂದು ಬೀಸಾಡುತ್ತಿರಬಹುದು ಅನಿಸುತ್ತದೆ. ಈ
ತ್ಯಾಜ್ಯದಿಂದಾಗಿ ಈ ಭಾಗದಲ್ಲಿ ದುರ್ವಾಸನೆ ಹೆಚ್ಚಾಗುವ ಜತೆಗೆ ಮಾಂಸದ ತ್ಯಾಜ್ಯ ತಿನ್ನಲು ಕಾಡುಪ್ರಾಣಿಗಳು ಬರುವ ಆತಂಕವೂ ಎದುರಾಗಿದೆ. ಈ ಕಾಲುವೆ ಮೇಲಿನ ರಸ್ತೆಯ ಮೂಲಕವೇ ಜನರು ಜಮೀನುಗಳಿಗೆ ಹೋಗಬೇಕಿದ್ದು, ದುರ್ವಾಸನೆಯನ್ನು ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡಬೇಕಿದೆ.

ಅಲ್ಲದೆ ಕಾಲುವೆಗಳನ್ನು ಸ್ವಚ್ಛಗೊಳಿಸದ ಪರಿಣಾಮ ಕಾಲುವೆಗಳ ಒಳಗೆ ಗಿಡಗಂಟಿಗಳು ಮಾತ್ರವಲ್ಲದೇ ಮರಗಳೂ ಬೆಳೆದುಕೊಂಡಿದ್ದು, ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಕಾಲುವೆಗಳನ್ನು ಸ್ವಚ್ಛಗೊಳಿಸುವ ಜತೆಗೆ ಕಾಲುವೆಗೆ ಮಾಂಸದ ತ್ಯಾಜ್ಯವನ್ನು ತಂದು ಸುರಿಯುವವರಿಗೆ ಕಡಿವಾಣ ಹಾಕಬೇಕಿದೆ.

-ಪ್ರಶಾಂತ್, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago