ಓದುಗರ ಪತ್ರ
ಮುಂಬರುವ ದಸರಾ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ. ೧೦ ಸಾವಿರ ಮಂದಿಗೆ ಕಾವೇರಿ ಆರತಿ ವೀಕ್ಷಣೆಗೆ ಸೌಲಭ್ಯ ಕಲ್ಪಿಸಲಾಗುವುದು, ಸರ್ಕಾರ ಇದಕ್ಕಾಗಿ ೧೦೦ ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರೇ ಹೇಳಿದ್ದಾರೆ. ಅವರು ಕುಂಭ ಮೇಳಕ್ಕೆ ಹೋಗಿದ್ದಾಗ ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿಯನ್ನು ನೋಡಿ ಈ ಯೋಜನೆಯನ್ನು ಘೋಷಿಸಿದ್ದಾರೆ. ಕಳೆದ ಮಾರ್ಚ್ ೨೨ ರಂದು ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಕಾವೇರಿ ಆರತಿ (ಇದು ಕೂಡ ಪ್ರಚಾರ ಉದ್ದೇಶದ್ದೇ) ನಡೆಸಿದ್ದಾಗಲೇ ಮುಖ್ಯಮಂತ್ರಿಗಳು ಕೆಆರ್ಎಸ್ನಲ್ಲಿ ೯೨ ಕೋಟಿ ರೂ. ಗಳ ವೆಚ್ಚದಲ್ಲಿ ಕಾವೇರಿ ಆರತಿ ನಡೆಸುವುದಾಗಿ ಘೋಷಣೆ ಮಾಡಿದ್ದರು.
ಪರಿಸರವಾದಿ ಅ. ನ. ಯಲ್ಲಪ್ಪರೆಡ್ಡಿ ಅವರು ಪತ್ರಿಕೆಯೊಂದಕ್ಕೆ ಬರೆದಿದ್ದ ಪತ್ರದಲ್ಲಿ ಗಂಗೆಯಂತೆ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ಇಂದು ಕೈಗಾರಿಕೆಗಳ ತ್ಯಾಜ್ಯ ನೀರು, ಹಳ್ಳಿ ಪಟ್ಟಣಗಳ ಕೊಳಚೆ ನೀರು ಸೇರಿ ಮಲಿನ ಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಆರತಿಗೆ ಬಿಡುಗಡೆ ಮಾಡಲು ಉದ್ದೇಶಿಸಿರುವ ೯೨ ಕೋಟಿ ರೂ. ಅನುದಾನದಿಂದ ೧೦ ಸಾವಿರ ಹೆಕ್ಟೇರ್ ಜೌಗು ಪ್ರದೇಶಾಭಿವೃದ್ಧಿ ಸಾಧ್ಯವಿದೆ. ಗಂಗಾರತಿಯಿಂದ ಎಂದಾದರೂ ಗಂಗೆ ಪವಿತ್ರವಾಗಿದೆಯೇ? ಇಲ್ಲ. . . ಇನ್ನಷ್ಟು ಮಲಿನವಾಗಿದೆ. ಅಂತೆಯೇ ಕಾವೇರಿ ಆರತಿ ಮಾಡಲು ಇಂತಹದೊಂದು ಬೃಹತ್ ಮೊತ್ತವನ್ನು ಖರ್ಚು ಮಾಡುವುದು ವ್ಯರ್ಥ, ಅರ್ಥಹೀನ ವಿಚಾರ ಎಂದಿದ್ದಾರೆ. ಇದು ನಿಜಕ್ಕೂ ಸಾರ್ವಜನಿಕರು ಚಿಂತಿಸಬೇಕಾದ ವಿಚಾರ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…