ಓದುಗರ ಪತ್ರ

ಓದುಗರ ಪತ್ರ | ಕಾವೇರಿ ಆರತಿ ಖರ್ಚು ವ್ಯರ್ಥ

ಮುಂಬರುವ ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ. ೧೦ ಸಾವಿರ ಮಂದಿಗೆ ಕಾವೇರಿ ಆರತಿ ವೀಕ್ಷಣೆಗೆ ಸೌಲಭ್ಯ ಕಲ್ಪಿಸಲಾಗುವುದು, ಸರ್ಕಾರ ಇದಕ್ಕಾಗಿ ೧೦೦ ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರೇ ಹೇಳಿದ್ದಾರೆ. ಅವರು ಕುಂಭ ಮೇಳಕ್ಕೆ ಹೋಗಿದ್ದಾಗ ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿಯನ್ನು ನೋಡಿ ಈ ಯೋಜನೆಯನ್ನು ಘೋಷಿಸಿದ್ದಾರೆ. ಕಳೆದ ಮಾರ್ಚ್ ೨೨ ರಂದು ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಕಾವೇರಿ ಆರತಿ (ಇದು ಕೂಡ ಪ್ರಚಾರ ಉದ್ದೇಶದ್ದೇ) ನಡೆಸಿದ್ದಾಗಲೇ ಮುಖ್ಯಮಂತ್ರಿಗಳು ಕೆಆರ್‌ಎಸ್‌ನಲ್ಲಿ ೯೨ ಕೋಟಿ ರೂ. ಗಳ ವೆಚ್ಚದಲ್ಲಿ ಕಾವೇರಿ ಆರತಿ ನಡೆಸುವುದಾಗಿ ಘೋಷಣೆ ಮಾಡಿದ್ದರು.

ಪರಿಸರವಾದಿ ಅ. ನ. ಯಲ್ಲಪ್ಪರೆಡ್ಡಿ ಅವರು ಪತ್ರಿಕೆಯೊಂದಕ್ಕೆ ಬರೆದಿದ್ದ ಪತ್ರದಲ್ಲಿ ಗಂಗೆಯಂತೆ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ಇಂದು ಕೈಗಾರಿಕೆಗಳ ತ್ಯಾಜ್ಯ ನೀರು, ಹಳ್ಳಿ ಪಟ್ಟಣಗಳ ಕೊಳಚೆ ನೀರು ಸೇರಿ ಮಲಿನ ಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಆರತಿಗೆ ಬಿಡುಗಡೆ ಮಾಡಲು ಉದ್ದೇಶಿಸಿರುವ ೯೨ ಕೋಟಿ ರೂ. ಅನುದಾನದಿಂದ ೧೦ ಸಾವಿರ ಹೆಕ್ಟೇರ್ ಜೌಗು ಪ್ರದೇಶಾಭಿವೃದ್ಧಿ ಸಾಧ್ಯವಿದೆ. ಗಂಗಾರತಿಯಿಂದ ಎಂದಾದರೂ ಗಂಗೆ ಪವಿತ್ರವಾಗಿದೆಯೇ? ಇಲ್ಲ. . . ಇನ್ನಷ್ಟು ಮಲಿನವಾಗಿದೆ. ಅಂತೆಯೇ ಕಾವೇರಿ ಆರತಿ ಮಾಡಲು ಇಂತಹದೊಂದು ಬೃಹತ್ ಮೊತ್ತವನ್ನು ಖರ್ಚು ಮಾಡುವುದು ವ್ಯರ್ಥ, ಅರ್ಥಹೀನ ವಿಚಾರ ಎಂದಿದ್ದಾರೆ. ಇದು ನಿಜಕ್ಕೂ ಸಾರ್ವಜನಿಕರು ಚಿಂತಿಸಬೇಕಾದ ವಿಚಾರ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago