ಓದುಗರ ಪತ್ರ

ಓದುಗರ ಪತ್ರ| ವಿದ್ಯಾರ್ಥಿಗಳ ಗೊಂದಲಗಳನ್ನು ನಿವಾರಿಸಿ

ಮೈಸೂರು ವಿಶ್ವವಿದ್ಯಾನಿಲಯದಿಂದ 2024-25ನೇ ಸಾಲಿನ ಸ್ನಾತಕೋತ್ತರ ಪದವಿ ವ್ಯಾಸಂಗದ ಪ್ರವೇಶಾತಿ ಪರೀಕ್ಷೆಗಳಿಗೆ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಕಾಡುತ್ತಿದೆ. ಜುಲೈ 10ರಿಂದ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆದರೆ ಈ ಅವಧಿಯಲ್ಲಿ ಹೆಚ್ಚುಸಮಯ ಸರ್ವ‌ ಸಮಸ್ಯೆಯೇ ಕಾಡುತ್ತಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಪರದಾಡುವಂತಾಗಿದೆ. ಇದರೊಂದಿಗೆ ಒಂದು ವಿಭಾಗಕ್ಕೆ ಅರ್ಜಿ ಶುಲ್ಕ 1,100 ರೂ., ಒಂದಕ್ಕಿಂತ ಹೆಚ್ಚು ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ 2,200 ರೂ. ನಿಗದಿ ಮಾಡಲಾಗಿದ್ದು, ಇದು ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಿದೆ. ಅಲ್ಲದೆ ವೆಬ್‌ಸೈಟ್‌ನಲ್ಲಿ ನೀಡಿರುವ ಪ್ರವೇಶ ಪರೀಕ್ಷೆಯ ಸಿಲಬಸ್ 2020ಕ್ಕಿಂತಲೂ ಹಳೆಯದಾಗಿದ್ದು, ಪದವಿ ವಿದ್ಯಾರ್ಥಿಗಳು ಯಾವ ಸಿಲಬಸ್ ಓದಬೇಕು ಎಂಬ ಗೊಂದಲಕ್ಕೊಳಗಾಗಿದ್ದಾರೆ. ಸರ್ವರ್ ಸಮಸ್ಯೆ, ದುಬಾರಿ ಶುಲ್ಕದ ನಡುವೆ ವಿದ್ಯಾರ್ಥಿಗಳಿಗೆ ಸಿಲಬಸ್‌ ಯಾವುದು ಎಂಬುದೇ ಗೊಂದಲವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸರ್ವರ್ ಸಮಸ್ಯೆ ಬಗೆಹರಿಸುವ ಜತೆಗೆ ವಿದ್ಯಾರ್ಥಿಗಳ ಗೊಂದಲಗಳನ್ನು ನಿವಾರಣೆ ಮಾಡಬೇಕಿದೆ.

– ಪಿ.ಮಲ್ಲಿಕಾರ್ಜುನಪ್ಪ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago