ಓದುಗರ ಪತ್ರ

ಓದುಗರ ಪತ್ರ| ವಿದ್ಯಾರ್ಥಿಗಳ ಗೊಂದಲಗಳನ್ನು ನಿವಾರಿಸಿ

ಮೈಸೂರು ವಿಶ್ವವಿದ್ಯಾನಿಲಯದಿಂದ 2024-25ನೇ ಸಾಲಿನ ಸ್ನಾತಕೋತ್ತರ ಪದವಿ ವ್ಯಾಸಂಗದ ಪ್ರವೇಶಾತಿ ಪರೀಕ್ಷೆಗಳಿಗೆ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಕಾಡುತ್ತಿದೆ. ಜುಲೈ 10ರಿಂದ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆದರೆ ಈ ಅವಧಿಯಲ್ಲಿ ಹೆಚ್ಚುಸಮಯ ಸರ್ವ‌ ಸಮಸ್ಯೆಯೇ ಕಾಡುತ್ತಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಪರದಾಡುವಂತಾಗಿದೆ. ಇದರೊಂದಿಗೆ ಒಂದು ವಿಭಾಗಕ್ಕೆ ಅರ್ಜಿ ಶುಲ್ಕ 1,100 ರೂ., ಒಂದಕ್ಕಿಂತ ಹೆಚ್ಚು ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ 2,200 ರೂ. ನಿಗದಿ ಮಾಡಲಾಗಿದ್ದು, ಇದು ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಿದೆ. ಅಲ್ಲದೆ ವೆಬ್‌ಸೈಟ್‌ನಲ್ಲಿ ನೀಡಿರುವ ಪ್ರವೇಶ ಪರೀಕ್ಷೆಯ ಸಿಲಬಸ್ 2020ಕ್ಕಿಂತಲೂ ಹಳೆಯದಾಗಿದ್ದು, ಪದವಿ ವಿದ್ಯಾರ್ಥಿಗಳು ಯಾವ ಸಿಲಬಸ್ ಓದಬೇಕು ಎಂಬ ಗೊಂದಲಕ್ಕೊಳಗಾಗಿದ್ದಾರೆ. ಸರ್ವರ್ ಸಮಸ್ಯೆ, ದುಬಾರಿ ಶುಲ್ಕದ ನಡುವೆ ವಿದ್ಯಾರ್ಥಿಗಳಿಗೆ ಸಿಲಬಸ್‌ ಯಾವುದು ಎಂಬುದೇ ಗೊಂದಲವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸರ್ವರ್ ಸಮಸ್ಯೆ ಬಗೆಹರಿಸುವ ಜತೆಗೆ ವಿದ್ಯಾರ್ಥಿಗಳ ಗೊಂದಲಗಳನ್ನು ನಿವಾರಣೆ ಮಾಡಬೇಕಿದೆ.

– ಪಿ.ಮಲ್ಲಿಕಾರ್ಜುನಪ್ಪ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago