ಓದುಗರ ಪತ್ರ

ಓದುಗರ ಪತ್ರ| ವಿದ್ಯಾರ್ಥಿಗಳ ಗೊಂದಲಗಳನ್ನು ನಿವಾರಿಸಿ

ಮೈಸೂರು ವಿಶ್ವವಿದ್ಯಾನಿಲಯದಿಂದ 2024-25ನೇ ಸಾಲಿನ ಸ್ನಾತಕೋತ್ತರ ಪದವಿ ವ್ಯಾಸಂಗದ ಪ್ರವೇಶಾತಿ ಪರೀಕ್ಷೆಗಳಿಗೆ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಕಾಡುತ್ತಿದೆ. ಜುಲೈ 10ರಿಂದ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆದರೆ ಈ ಅವಧಿಯಲ್ಲಿ ಹೆಚ್ಚುಸಮಯ ಸರ್ವ‌ ಸಮಸ್ಯೆಯೇ ಕಾಡುತ್ತಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಪರದಾಡುವಂತಾಗಿದೆ. ಇದರೊಂದಿಗೆ ಒಂದು ವಿಭಾಗಕ್ಕೆ ಅರ್ಜಿ ಶುಲ್ಕ 1,100 ರೂ., ಒಂದಕ್ಕಿಂತ ಹೆಚ್ಚು ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ 2,200 ರೂ. ನಿಗದಿ ಮಾಡಲಾಗಿದ್ದು, ಇದು ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗಿದೆ. ಅಲ್ಲದೆ ವೆಬ್‌ಸೈಟ್‌ನಲ್ಲಿ ನೀಡಿರುವ ಪ್ರವೇಶ ಪರೀಕ್ಷೆಯ ಸಿಲಬಸ್ 2020ಕ್ಕಿಂತಲೂ ಹಳೆಯದಾಗಿದ್ದು, ಪದವಿ ವಿದ್ಯಾರ್ಥಿಗಳು ಯಾವ ಸಿಲಬಸ್ ಓದಬೇಕು ಎಂಬ ಗೊಂದಲಕ್ಕೊಳಗಾಗಿದ್ದಾರೆ. ಸರ್ವರ್ ಸಮಸ್ಯೆ, ದುಬಾರಿ ಶುಲ್ಕದ ನಡುವೆ ವಿದ್ಯಾರ್ಥಿಗಳಿಗೆ ಸಿಲಬಸ್‌ ಯಾವುದು ಎಂಬುದೇ ಗೊಂದಲವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸರ್ವರ್ ಸಮಸ್ಯೆ ಬಗೆಹರಿಸುವ ಜತೆಗೆ ವಿದ್ಯಾರ್ಥಿಗಳ ಗೊಂದಲಗಳನ್ನು ನಿವಾರಣೆ ಮಾಡಬೇಕಿದೆ.

– ಪಿ.ಮಲ್ಲಿಕಾರ್ಜುನಪ್ಪ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

4 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

7 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

7 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

7 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

7 hours ago