ಓದುಗರ ಪತ್ರ

ಓದುಗರ ಪತ್ರ| ಪ್ರಜಾಪ್ರಭುತ್ವದ ಉಳಿವಿಗೆ ವಿಪಕ್ಷಗಳು ಬಲಗೊಳ್ಳಬೇಕು

ಲೋಕಸಭಾ ಚುನಾವಣೆಯಲ್ಲಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಎನ್‌ಡಿಎ ಮೈತ್ರಿಕೂಟದ ಪ್ರಬಲ ಪಕ್ಷವಾಗಿ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದ್ದು, ಇತ್ತೀಚೆಗೆ ನಡೆದ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 10 ಸ್ಥಾನಗಳನ್ನು ಗಳಿಸುವ ಮೂಲಕ ತನ್ನ ಶಕ್ತಿ ಪ್ರದರ್ಶಿಸಿದೆ. ಉಳಿದಂತೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದರೆ, ಹಿಮಾಚಲ ಪ್ರದೇಶದ ಹಮೀರ್‌ಪುರ ಕ್ಷೇತ್ರ ಮತ್ತು ಅಮರವಾರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳ ಈ ಗೆಲುವು ಇಂಡಿಯಾ ಮೈತ್ರಿಕೂಟವನ್ನು ಬಲಗೊಳಿಸಲು ಸಹಕಾರಿಯಾಗಿದೆ. ಇದೇ ರೀತಿ ಬಲಗೊಳ್ಳುತ್ತಾ ಹೋದರೆ, ಆಡಳಿತಾರೂಢ ಪಕ್ಷದ ಏಕಪಕ್ಷೀಯ ನಿರ್ಧಾರಗಳನ್ನು ಕಟುವಾಗಿ ವಿರೋಧಿಸಬಹುದು. ಆ ಮೂಲಕ ವಿಪಕ್ಷಗಳ ಬಲ ಹೆಚ್ಚಾದಷ್ಟು ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago