ಓದುಗರ ಪತ್ರ

ಓದುಗರ ಪತ್ರ| ಪ್ರಜಾಪ್ರಭುತ್ವದ ಉಳಿವಿಗೆ ವಿಪಕ್ಷಗಳು ಬಲಗೊಳ್ಳಬೇಕು

ಲೋಕಸಭಾ ಚುನಾವಣೆಯಲ್ಲಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಎನ್‌ಡಿಎ ಮೈತ್ರಿಕೂಟದ ಪ್ರಬಲ ಪಕ್ಷವಾಗಿ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದ್ದು, ಇತ್ತೀಚೆಗೆ ನಡೆದ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 10 ಸ್ಥಾನಗಳನ್ನು ಗಳಿಸುವ ಮೂಲಕ ತನ್ನ ಶಕ್ತಿ ಪ್ರದರ್ಶಿಸಿದೆ. ಉಳಿದಂತೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದರೆ, ಹಿಮಾಚಲ ಪ್ರದೇಶದ ಹಮೀರ್‌ಪುರ ಕ್ಷೇತ್ರ ಮತ್ತು ಅಮರವಾರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳ ಈ ಗೆಲುವು ಇಂಡಿಯಾ ಮೈತ್ರಿಕೂಟವನ್ನು ಬಲಗೊಳಿಸಲು ಸಹಕಾರಿಯಾಗಿದೆ. ಇದೇ ರೀತಿ ಬಲಗೊಳ್ಳುತ್ತಾ ಹೋದರೆ, ಆಡಳಿತಾರೂಢ ಪಕ್ಷದ ಏಕಪಕ್ಷೀಯ ನಿರ್ಧಾರಗಳನ್ನು ಕಟುವಾಗಿ ವಿರೋಧಿಸಬಹುದು. ಆ ಮೂಲಕ ವಿಪಕ್ಷಗಳ ಬಲ ಹೆಚ್ಚಾದಷ್ಟು ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

8 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

8 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

9 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

18 hours ago