ಓದುಗರ ಪತ್ರ

ಓದುಗರ ಪತ್ರ: ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ.

ಸಂಜೆ 6 ಗಂಟೆಯಾಗುತ್ತಿದ್ದಂತೆಯೇ ಮದ್ಯ ವ್ಯಸನಿಗಳು ಮಹದೇಶ್ವರ ದೇವಸ್ಥಾನದ ಬಳಿ ಅಲ್ಲಲ್ಲಿ ಗುಂಪು ಕಟ್ಟಿಕೊಂಡು ಮದ್ಯದ ಕೂಟಗಳನ್ನು ಮಾಡುತ್ತಾರೆ. ದೇವಸ್ಥಾನದ ಆವರಣದಲ್ಲಿಯೇ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಿದ್ದು, ಮದ್ಯವ್ಯಸನಿಗಳು ಕುಡಿದು ಎಲ್ಲೆಂದರಲ್ಲಿ ಬಾಟಲಿ ಬೀಸಾಡುತ್ತಾರೆ ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇನ್ನು ಗ್ರಾಮದ ಪ್ರವೇಶದ್ವಾರದಲ್ಲಿಯೇ ಇರುವ ಗಣಪತಿ ದೇವಾಲಯದ ಮುಂದೆಯೂ ಇದೇ ಸಮಸ್ಯೆ ಎದುರಾಗಿದೆ. ಕೆಲ ಮದ್ಯವ್ಯಸನಿಗಳು ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯಪಾನ ಮಾಡುತ್ತಾರೆ. ಕುಡಿದ ಮತ್ತಿನಲ್ಲಿ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಳ್ಳುತ್ತಾ ಮಾತನಾಡುತ್ತಿರುತ್ತಾರೆ.

ಇದರಿಂದಾಗಿ ದೇವಸ್ಥಾನಕ್ಕೆ ಬರುವ ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆಗಮನಹರಿಸಿ, ದೇವಾಲಯಗಳ ಆವರಣದಲ್ಲಿ ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.

-ನಂದೀಶ್ ಗೌಡ, ಅಂತರಸಂತೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

58 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

1 hour ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

1 hour ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

4 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

4 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

4 hours ago