ಓದುಗರ ಪತ್ರ

ಓದುಗರ ಪತ್ರ: ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ.

ಸಂಜೆ 6 ಗಂಟೆಯಾಗುತ್ತಿದ್ದಂತೆಯೇ ಮದ್ಯ ವ್ಯಸನಿಗಳು ಮಹದೇಶ್ವರ ದೇವಸ್ಥಾನದ ಬಳಿ ಅಲ್ಲಲ್ಲಿ ಗುಂಪು ಕಟ್ಟಿಕೊಂಡು ಮದ್ಯದ ಕೂಟಗಳನ್ನು ಮಾಡುತ್ತಾರೆ. ದೇವಸ್ಥಾನದ ಆವರಣದಲ್ಲಿಯೇ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಿದ್ದು, ಮದ್ಯವ್ಯಸನಿಗಳು ಕುಡಿದು ಎಲ್ಲೆಂದರಲ್ಲಿ ಬಾಟಲಿ ಬೀಸಾಡುತ್ತಾರೆ ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇನ್ನು ಗ್ರಾಮದ ಪ್ರವೇಶದ್ವಾರದಲ್ಲಿಯೇ ಇರುವ ಗಣಪತಿ ದೇವಾಲಯದ ಮುಂದೆಯೂ ಇದೇ ಸಮಸ್ಯೆ ಎದುರಾಗಿದೆ. ಕೆಲ ಮದ್ಯವ್ಯಸನಿಗಳು ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯಪಾನ ಮಾಡುತ್ತಾರೆ. ಕುಡಿದ ಮತ್ತಿನಲ್ಲಿ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಳ್ಳುತ್ತಾ ಮಾತನಾಡುತ್ತಿರುತ್ತಾರೆ.

ಇದರಿಂದಾಗಿ ದೇವಸ್ಥಾನಕ್ಕೆ ಬರುವ ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆಗಮನಹರಿಸಿ, ದೇವಾಲಯಗಳ ಆವರಣದಲ್ಲಿ ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.

-ನಂದೀಶ್ ಗೌಡ, ಅಂತರಸಂತೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

13 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

23 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

1 hour ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

1 hour ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 hours ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

2 hours ago