ಓದುಗರ ಪತ್ರ

ಓದುಗರ ಪತ್ರ: ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ.

ಸಂಜೆ 6 ಗಂಟೆಯಾಗುತ್ತಿದ್ದಂತೆಯೇ ಮದ್ಯ ವ್ಯಸನಿಗಳು ಮಹದೇಶ್ವರ ದೇವಸ್ಥಾನದ ಬಳಿ ಅಲ್ಲಲ್ಲಿ ಗುಂಪು ಕಟ್ಟಿಕೊಂಡು ಮದ್ಯದ ಕೂಟಗಳನ್ನು ಮಾಡುತ್ತಾರೆ. ದೇವಸ್ಥಾನದ ಆವರಣದಲ್ಲಿಯೇ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಿದ್ದು, ಮದ್ಯವ್ಯಸನಿಗಳು ಕುಡಿದು ಎಲ್ಲೆಂದರಲ್ಲಿ ಬಾಟಲಿ ಬೀಸಾಡುತ್ತಾರೆ ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇನ್ನು ಗ್ರಾಮದ ಪ್ರವೇಶದ್ವಾರದಲ್ಲಿಯೇ ಇರುವ ಗಣಪತಿ ದೇವಾಲಯದ ಮುಂದೆಯೂ ಇದೇ ಸಮಸ್ಯೆ ಎದುರಾಗಿದೆ. ಕೆಲ ಮದ್ಯವ್ಯಸನಿಗಳು ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯಪಾನ ಮಾಡುತ್ತಾರೆ. ಕುಡಿದ ಮತ್ತಿನಲ್ಲಿ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಳ್ಳುತ್ತಾ ಮಾತನಾಡುತ್ತಿರುತ್ತಾರೆ.

ಇದರಿಂದಾಗಿ ದೇವಸ್ಥಾನಕ್ಕೆ ಬರುವ ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆಗಮನಹರಿಸಿ, ದೇವಾಲಯಗಳ ಆವರಣದಲ್ಲಿ ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.

-ನಂದೀಶ್ ಗೌಡ, ಅಂತರಸಂತೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

28 mins ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

30 mins ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

32 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

34 mins ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

38 mins ago