ಓದುಗರ ಪತ್ರ

ಓದುಗರ ಪತ್ರ: ರಸ್ತೆ ದುರಸ್ತಿಪಡಿಸಿ

ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ ನಗರ, ಮಾಲೆಗಾಲದ ಮಾರಮ್ಮನವರ ದೇವಸ್ಥಾನ, ವಿವೇಕಾನಂದ ನಗರದ ಮೂಲಕವೂ ಮೈಸೂರನ್ನು ತಲುಪುತ್ತಾರೆ.

ನಿತ್ಯ ನೂರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ವಾಹನದಟ್ಟಣೆ ಹೆಚ್ಚಾಗಿರುವ ಈ ರಸ್ತೆಯು ಕೆಂಚಲಗೂಡು ಗೇಟ್‌ನಿಂದ ವರ್ತುಲ ರಸ್ತೆಯವರೆಗೆ ಸುಮಾರು ಐದು ಕಿಲೋಮೀಟರ್‌ನಷ್ಟು ಉದ್ದವಿದ್ದು, ಈ ಪೈಕಿ ಸುಮಾರು ಒಂದೂವರೆ ಕಿಲೋಮೀಟರ್‌ನಷ್ಟು ರಸ್ತೆ ತೀರಾ ಹದಗೆಟ್ಟು ಹೋಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ನೀರು ತುಂಬಿಕೊಂಡು ಗುಂಡಿ ಕಾಣದೆ ಅನೇಕ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ.

ಈ ರಸ್ತೆಯನ್ನು ದುರಸ್ತಿಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಇಲಾಖೆಯ ಮೇಲಽಕಾರಿಗಳು ಗಮನಹರಿಸಿ ತುರ್ತಾಗಿ ಈ ರಸ್ತೆಯನ್ನು ದುರಸ್ತಿ ಮಾಡಬೇಕಿದೆ.

-ಕೆ.ಪಿ.ನಂಜುಂಡ ಸ್ವಾಮಿ, ಕೆಎಚ್‌ಬಿ ಬಡಾವಣೆ, ಕೆಂಚಲಗೂಡು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

32 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

15 hours ago