ಓದುಗರ ಪತ್ರ

ಓದುಗರ ಪತ್ರ: ರಸ್ತೆ ದುರಸ್ತಿಪಡಿಸಿ

ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ ನಗರ, ಮಾಲೆಗಾಲದ ಮಾರಮ್ಮನವರ ದೇವಸ್ಥಾನ, ವಿವೇಕಾನಂದ ನಗರದ ಮೂಲಕವೂ ಮೈಸೂರನ್ನು ತಲುಪುತ್ತಾರೆ.

ನಿತ್ಯ ನೂರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ವಾಹನದಟ್ಟಣೆ ಹೆಚ್ಚಾಗಿರುವ ಈ ರಸ್ತೆಯು ಕೆಂಚಲಗೂಡು ಗೇಟ್‌ನಿಂದ ವರ್ತುಲ ರಸ್ತೆಯವರೆಗೆ ಸುಮಾರು ಐದು ಕಿಲೋಮೀಟರ್‌ನಷ್ಟು ಉದ್ದವಿದ್ದು, ಈ ಪೈಕಿ ಸುಮಾರು ಒಂದೂವರೆ ಕಿಲೋಮೀಟರ್‌ನಷ್ಟು ರಸ್ತೆ ತೀರಾ ಹದಗೆಟ್ಟು ಹೋಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ನೀರು ತುಂಬಿಕೊಂಡು ಗುಂಡಿ ಕಾಣದೆ ಅನೇಕ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ.

ಈ ರಸ್ತೆಯನ್ನು ದುರಸ್ತಿಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಇಲಾಖೆಯ ಮೇಲಽಕಾರಿಗಳು ಗಮನಹರಿಸಿ ತುರ್ತಾಗಿ ಈ ರಸ್ತೆಯನ್ನು ದುರಸ್ತಿ ಮಾಡಬೇಕಿದೆ.

-ಕೆ.ಪಿ.ನಂಜುಂಡ ಸ್ವಾಮಿ, ಕೆಎಚ್‌ಬಿ ಬಡಾವಣೆ, ಕೆಂಚಲಗೂಡು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

2 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

15 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

16 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

16 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

17 hours ago