2012ರಲ್ಲಿಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇನ್ನೂ ತಾರ್ಕಿಕ ಅಂತ್ಯ ಕಾಣದೆ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕದಿರುವುದು ಬೇಸರದ ಸಂಗತಿ. ಇತ್ತೀಚೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂಬ ಯೂಟ್ಯೂಬರ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಸದ್ಯ ಈ ವಿಡಿಯೋ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದು, ಸೌಜನ್ಯ ಪ್ರಕರಣ ಮತ್ತೆ ಮುನ್ನೆಲೆಗೆ ಬರುವಂತೆ ಮಾಡಿದೆ.
ಕಳೆದ 12-13 ವರ್ಷಗಳಿಂದಲೂ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ರಾಜ್ಯಾದ್ಯಂತ ಹೋರಾಟಗಳು, ಪ್ರತಿಭಟನೆಗಳೂ ನಡೆಯುತ್ತಿವೆಯಾದರೂ ಇನ್ನೂ ನ್ಯಾಯ ದೊರಕದಿರುವುದನ್ನು ನೋಡಿದರೆ, ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಾಣುತ್ತದೆ. ಸರ್ಕಾರ ಈ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ, ಸತ್ಯಾಂಶವನ್ನು ಹೊರತಂದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…