ಓದುಗರ ಪತ್ರ
ನಟ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಅದಾಗಲೇ ಮೂರು ವರ್ಷಗಳ ಮೇಲಾಗಿದ್ದರೂ ಅವರ ಸಮಾಜಮುಖಿ ಕೆಲಸಗಳು ಅವರನ್ನು ಇಂದಿಗೂ ಕನ್ನಡಿಗರ ಮನದಲ್ಲಿ ಜೀವಂತವಾಗಿರಿಸಿವೆ.
ಬಾಲಕನಾಗಿರುವಾಗಲೇ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ಪುನೀತ್ ರಾಜ್ ಕುಮಾರ್ 12ನೇ ವಯಸ್ಸಿಗೆ ರಾಷ್ಟ್ರಪ್ರಶಸ್ತಿಗಳಿಸಿದ ಪ್ರತಿಭಾವಂತ ನಟ. ಅಪ್ಪು, ಅಭಿ, ಮೌರ್ಯ, ಮಿಲನ, ರಾಜಕುಮಾರದಂತಹ ಕೌಟುಂಬಿಕ ಚಿತ್ರಗಳಲ್ಲಿ ನಾಯಕನಟನಾಗಿ ಅಭಿನಯಿಸುವ ಮೂಲಕ ಜನಮನ ಗೆದ್ದ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಇಂದಿಗೂ ಹೊಂದಿದ್ದಾರೆ.
ಸಾಮಾಜಿಕ ಕಳಕಳಿಯುಳ್ಳ ಚಿತ್ರಗಳಲ್ಲಿ ನಟಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ಪುನೀತ್ ರಾಜ್ಕುಮಾರ್ರವರ ಚಿತ್ರಗಳು ಎಂದರೆ ಜನರಿಗೆ ಇಂದಿಗೂ ಅಚ್ಚುಮೆಚ್ಚು. ಕನ್ನಡದ ಕೋಟ್ಯಾಧಿಪತಿ ಎಂಬ
ಜನಪ್ರಿಯ ಕಿರುತೆರೆ ಕಾರ್ಯಕ್ರಮ ನಡೆಸಿಕೊಡುವ ವೇಳೆಗೆ ಅಪ್ಪು ಭಾರಿ ಪರಿಪಕ್ವಗೊಂಡು ಬಿಟ್ಟಿದ್ದರು. ಪುನೀತ್ ತಾವೆಷ್ಟೇ ದೊಡ್ಡ ನಟರಾಗಿದ್ದರು ತಂದೆ ರಾಜ್ಕುಮಾರ್ರಂತೆ ಉತ್ತಮ ಸಂಸ್ಕಾರ ಉಳ್ಳವರಾಗಿದ್ದರು. ಇಂತಹ ಅಪರೂಪದ ನಟನನ್ನು ಕಳೆದುಕೊಂಡಿದ್ದು, ಕನ್ನಡ ಸಿನಿಮಾ ರಂಗಕ್ಕೆ ತುಂಬಲಾರದ ನಷ್ಟ.
-ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾ.
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…