ಓದುಗರ ಪತ್ರ
ನಟ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಅದಾಗಲೇ ಮೂರು ವರ್ಷಗಳ ಮೇಲಾಗಿದ್ದರೂ ಅವರ ಸಮಾಜಮುಖಿ ಕೆಲಸಗಳು ಅವರನ್ನು ಇಂದಿಗೂ ಕನ್ನಡಿಗರ ಮನದಲ್ಲಿ ಜೀವಂತವಾಗಿರಿಸಿವೆ.
ಬಾಲಕನಾಗಿರುವಾಗಲೇ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ಪುನೀತ್ ರಾಜ್ ಕುಮಾರ್ 12ನೇ ವಯಸ್ಸಿಗೆ ರಾಷ್ಟ್ರಪ್ರಶಸ್ತಿಗಳಿಸಿದ ಪ್ರತಿಭಾವಂತ ನಟ. ಅಪ್ಪು, ಅಭಿ, ಮೌರ್ಯ, ಮಿಲನ, ರಾಜಕುಮಾರದಂತಹ ಕೌಟುಂಬಿಕ ಚಿತ್ರಗಳಲ್ಲಿ ನಾಯಕನಟನಾಗಿ ಅಭಿನಯಿಸುವ ಮೂಲಕ ಜನಮನ ಗೆದ್ದ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಇಂದಿಗೂ ಹೊಂದಿದ್ದಾರೆ.
ಸಾಮಾಜಿಕ ಕಳಕಳಿಯುಳ್ಳ ಚಿತ್ರಗಳಲ್ಲಿ ನಟಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ಪುನೀತ್ ರಾಜ್ಕುಮಾರ್ರವರ ಚಿತ್ರಗಳು ಎಂದರೆ ಜನರಿಗೆ ಇಂದಿಗೂ ಅಚ್ಚುಮೆಚ್ಚು. ಕನ್ನಡದ ಕೋಟ್ಯಾಧಿಪತಿ ಎಂಬ
ಜನಪ್ರಿಯ ಕಿರುತೆರೆ ಕಾರ್ಯಕ್ರಮ ನಡೆಸಿಕೊಡುವ ವೇಳೆಗೆ ಅಪ್ಪು ಭಾರಿ ಪರಿಪಕ್ವಗೊಂಡು ಬಿಟ್ಟಿದ್ದರು. ಪುನೀತ್ ತಾವೆಷ್ಟೇ ದೊಡ್ಡ ನಟರಾಗಿದ್ದರು ತಂದೆ ರಾಜ್ಕುಮಾರ್ರಂತೆ ಉತ್ತಮ ಸಂಸ್ಕಾರ ಉಳ್ಳವರಾಗಿದ್ದರು. ಇಂತಹ ಅಪರೂಪದ ನಟನನ್ನು ಕಳೆದುಕೊಂಡಿದ್ದು, ಕನ್ನಡ ಸಿನಿಮಾ ರಂಗಕ್ಕೆ ತುಂಬಲಾರದ ನಷ್ಟ.
-ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…