ಓದುಗರ ಪತ್ರ
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣದಿಂದ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ದಾಖಲು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತ ವಾಗಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಂತಿದೆ.
ಮುಗ್ಧ ಮಕ್ಕಳ ಮನಸ್ಸಿನಲ್ಲಿ ಜಾತಿಯ ವಿಷಬೀಜ ಬಿತ್ತುವುದು ಒಳ್ಳೆಯ ಬೆಳವಣಿಗೆಯಲ್ಲ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಮನಸ್ಸಿನಲ್ಲಿ ಜಾತಿಯ ವಿಷಬೀಜ ಬಿತ್ತುವುದನ್ನು ಬಿಟ್ಟು , ಎಲ್ಲರೂ ಸಮಾನರು ಎಂಬ ಮಾನವತೆಯ ಸಂದೇಶವನ್ನು ಸಾರಬೇಕು. ಇನ್ನಾದರೂ ಜಾತಿಯೆಂಬ ರೋಗಗ್ರಸ್ತ ಮನಸ್ಥಿತಿಯಿಂದ ಹೊರಬರಬೇಕು.
– ಎಂ. ಪಿ. ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…