ಓದುಗರ ಪತ್ರ

ಓದುಗರ ಪತ್ರ | ಶಾಲಾ ಹಂತದಲ್ಲಿಯೇ ಮಕ್ಕಳ ಆಧಾರ್ ಕಾರ್ಡ್‌ ತಿದ್ದುಪಡಿಯಾಗಲಿ

ಶಾಲಾ ಮಕ್ಕಳ ಹೆಸರು ಆಧಾರ್‌ಕಾರ್ಡ್ ಹಾಗೂ ಶಾಲಾ ಎಸ್‌ಟಿಎಸ್ ನಲ್ಲಿ (ಸ್ಪೂಡೆಂಟ್ ಟ್ಯಾಕಿಂಗ್ ಸಿಸ್ಟಮ್) ಬೇರೆ ಬೇರೆಯಾಗಿದ್ದು, ಅದನ್ನು ಸರಿಪಡಿಸುವ ಸಲುವಾಗಿ ಆಧಾರ್ ಕಾರ್ಡ್ ತಿದ್ದುಪಡಿಗೆ ಮಕ್ಕಳು ತಿಂಗಳುಗಟ್ಟಲೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಶಾಲಾ ಮಕ್ಕಳ ಆಧಾರ್‌ಕಾರ್ಡ್ ತಿದ್ದು ಪಡಿಗೆಂದು ಸಂಬಂಧಪಟ್ಟ ಕಚೇರಿಗೆ ಹೋದರೆ ಅಲ್ಲಿನ ಸಿಬ್ಬಂದಿ ಇಲ್ಲ ಸಲ್ಲದ ದಾಖಲೆಗಳನ್ನು ಕೇಳುತ್ತಾ ಕಾಲಹರಣ ಮಾಡುತ್ತಿದ್ದಾರೆಯೇ ವಿನಾ ಆಧಾ‌
ಕಾರ್ಡ್ ತಿದ್ದುಪಡಿ ಮಾಡುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ತರಗತಿ ಗಳನ್ನು ಬಿಟ್ಟು ನಿತ್ಯ ಆಧಾರ್‌ಕಾರ್ಡ್‌ ತಿದ್ದುಪಡಿಗಾಗಿ ಪೋಷಕರೊಂದಿಗೆ ಅಲೆದಾಡಬೇಕಾಗಿದೆ. ಆಧಾರ್‌ಕಾರ್ಡ್‌ನಲ್ಲಿ ಆಗಿರುವ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳ ಹೆಸರು ಆಧಾರ್‌ಕಾರ್ಡ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನದ ತಂತ್ರಾಂಶ ಹಾಗೂ ಶಾಲಾ ಎಸ್‌ಟಿಎಸ್ ತಂತ್ರಾಂಶದಲ್ಲಿ ತಾಳೆಯಾಗದೆ ವಿದ್ಯಾರ್ಥಿ ವೇತನದಿಂದ ವಂಚಿತರಾಗು ವಂತಾಗಿದೆ. ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಆಧಾರ್‌ಕಾರ್ಡ್‌ ತಿದ್ದುಪಡಿ ಯನ್ನು ಶಾಲಾ ಹಂತದಲ್ಲಿ ಅಥವಾ ಕ್ಲಸ್ಟರ್‌ಮಟ್ಟದಲ್ಲಿಯೇ ಮಾಡುವ ಅವಕಾಶ ಕಲ್ಪಿಸಿದರೆ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. -ಕೆ.ಎಸ್.ಸುರೇಶ್, ಮುಖ್ಯ ಶಿಕ್ಷಕರು, ಸರಗೂರು,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

32 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago