ಮುಂಬರುವ ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ನೀರಿನ ಬಾಟಲ್ ಸಹಿತ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿರುವುದು ಸ್ವಾಗತಾರ್ಹ.
ಅರ್ಚಕರಿಗೆ ನೇರ ವರ್ಗಾವಣೆ ಮೂಲಕ ತಸ್ತಿಕ್ ಹಣ ನೀಡಲು ಕ್ರಮ ಕೈಗೊಂಡಿದ್ದು ಈಗ 25 ಸಾವಿರ ಅರ್ಚಕರ ಪೈಕಿ 14 ಸಾವಿರ ಅರ್ಚಕರು ಮಾಹಿತಿ ನೀಡಿದ್ದು, ಉಳಿದವರು ಮಾಹಿತಿ ನೀಡಿದ ತಕ್ಷಣ ಅವರಿಗೂ ಡಿಬಿಟಿ ಮೂಲಕ ತಸ್ತೀಕ್ ಹಣ ನೀಡಲಾಗುವುದು ಎಂದಿರುವುದು ಶ್ಲಾಘನೀಯ. ರಾಜ್ಯದಲ್ಲಿನ ಪ್ರಮುಖ ದೇವಾಲಯಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಿರುವುದು ಸೂಕ್ತ ನಿರ್ಧಾರ. -ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.





