ಓದುಗರ ಪತ್ರ
ಚೆನ್ನೈನಲ್ಲಿ ನಡೆದ ಥಗ್ಲೈಫ್- ಸಿನಿಮಾ ಈವೆಂಟ್ನಲ್ಲಿ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದೇ ಸಮಾರಂಭದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರೂ ಅವರು ಆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ ನೀಡದದ್ದು ಬೇಸರ ತಂದಿದೆ. ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ಅವರು ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸಬೇಕೆಂದು ಪ್ರತಿಭಟಿಸಿ ಒತ್ತಾಯಿಸಿವೆ. ಇದಕ್ಕೆ ಸ್ಪಷ್ಟೀಕರಣ ನೀಡಿರುವ ಕಮಲ್ ಹಾಸನ್, ನಾನು ಪ್ರೀತಿಯಿಂದ ಹೇಳಿದ್ದೇನೆ. ಪ್ರೀತಿಯಿಂದ ಆಡಿದ ಮಾತಿಗೆ ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ್ದಾರೆ. ಇಂತಹ ಹೇಳಿಕೆಗಳಿಂದ ರಾಜ್ಯ-ರಾಜ್ಯಗಳ ನಡುವೆ ಇರುವ ಸಾಮರಸ್ಯ ಹಾಳಾಗುತ್ತದೆ.
ನಟ ಕಮಲ್ ಹಾಸನ್ ಅವರು ಕೂಡಲೇ ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸುವ ಮೂಲಕ ವಿವಾದವನ್ನು ಅಂತ್ಯಗೊಳಿಸುವುದು ಅಗತ್ಯ.
-ಎ. ಎಸ್. ಗೋಪಾಲ ಕೃಷ್ಣ, ರಾಮಕೃಷ್ಣನಗರ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…